
ಭುವನೇಶ್ವರ್(ಮೇ.03): 1999ರ ಬಳಿಕ ದೇಶ ಎದುರಿಸುತ್ತಿರುವ ಭೀಕರ ಚಂಡಮಾರುತಕ್ಕೆ ಒಡಿಶಾ ತತ್ತರಿಸಿ ಹೋಗಿದೆ. ಫನಿ ಚಂಡಮಾರುತ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಈಗಾಗಲೇ ಮೂವರನ್ನು ಬಲಿ ಪಡೆದಿದೆ.
ಈ ಮಧ್ಯೆ ಒಡಿಶಾ ಜನತೆಗೆ ಧೈರ್ಯದ ಸಂದೇಶ ಕಳುಹಿಸಿರುವ ಪ್ರಧಾನಿ ಮೋದಿ, ಇಡೀ ದೇಶ ನಿಮ್ಮೊಂದಿಗಿದೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಒಡಿಶಾಗೆ ಸಕಲ ನೆರವು ನೀಡಲು ಕೇಂದ್ರ ಸರ್ಕಾರ ಸರ್ವ ಸನ್ನದ್ಧವಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಬಹುತೇಕವಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ದೇವಾಲಯಗಳ ನಗರಿ ಪುರಿ ಭಾರೀ ಮಳೆಗೆ ಸಾಕ್ಷಿಯಾಗಿದೆ. ಇದುವರೆಗೂ ಸುಮಾರು 11 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದ್ದು, ಭೂಸೇನೆ, ನೌಕಾಸೇನೆ, ವಾಯುಸೇನೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ಸರ್ವ ಸನ್ನದ್ದುಗೊಳಿಸಲಾಗಿದೆ.
ಈ ಮಧ್ಯೆ ಒಡಿಶಾ ಕರಾವಳಿಯಲ್ಲಿ ಕರ್ತವ್ಯನಿರತವಾಗಿರುವ ನೌಕಾಪಡೆಯ ಹಡಗೊಂದು ಭೀಕರ ಅಲೆಗಳ ಹೊಡೆತಕ್ಕೆ ಸಿಕ್ಕಿದೆ. ಈ ಕುರಿತು ಫೋಟೋ ಬಿಡುಗಡೆ ಮಾಡಿರುವ ನೌಕಾಪಡೆ, ಸಮುದ್ರದ ನೀರು ಹಡಗಿನ ಡೆಕ್ ನ್ನು ಆವರಿಸಿರುವ ಕುರಿತು ಮಾಹಿತಿ ನೀಡಿದೆ.
ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರ ಸಭೆಗಳನ್ನು ರದ್ದುಪಡಿಸಲಾಗಿದ್ದು, ಒಡಿಶಾ, ಆಂಧ್ರದಲ್ಲಿ ಚುನಾವಣಾ ನೀಡಿ ಸಂಹಿತೆಯನ್ನು ಸಡಿಲಗೊಳಿಸಲಾಗಿದೆ.
ಇನ್ನು ಫನಿ ಚಂಡಮಾರುತ ಎದುರಿಸಲು ಕೇಂದ್ರ ಸರ್ಕಾರ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಮೂಲಗಳು ತಿಳಿಸಿವೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.