ರಾಷ್ಟ್ರಗೀತೆ ವೇಳೆ ಅಂಧರೂ ಎದ್ದುನಿಲ್ಲಬೇಕು

Published : Jan 26, 2017, 05:56 AM ISTUpdated : Apr 11, 2018, 12:57 PM IST
ರಾಷ್ಟ್ರಗೀತೆ ವೇಳೆ ಅಂಧರೂ ಎದ್ದುನಿಲ್ಲಬೇಕು

ಸಾರಾಂಶ

ಬೌದ್ಧಿಕ ಅಸಾಮರ್ಥ್ಯರಿಗೆ ಮಾತ್ರ ನಿಯಮಗಳಲ್ಲಿ ಸಡಿಲಿಕೆ ನೀಡಲಾಗಿದೆ.

ನವದೆಹಲಿ(ಜ.26): ಸಿನೆಮಾ ಮಂದಿರಗಳಲ್ಲಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ಹಾಡುವ ವೇಳೆ ಎದ್ದುನಿಲ್ಲಲು ಸಾಧ್ಯವಾಗದ ದಿವ್ಯಾಂಗರು ಗರಿಷ್ಠ ಮಟ್ಟದಲ್ಲಿ ಸೌಜನ್ಯ ತೋರಬೇಕು, ಕಿವುಡರು ಹಾಗೂ ಅಂಧರು ಎದ್ದು ನಿಂತು ಗೌರವ ಸಲ್ಲಿಸಬೇಕು ಎಂದು ಸರ್ಕಾರ ತನ್ನ ಪ್ರಕಟಣೆ ತಿಳಿಸಿದೆ.

ರಾಷ್ಟ್ರಗೀತೆಗೆ ದಿವ್ಯಾಂಗರು ಗೌರವ ಸಲ್ಲಿಸುವ ಕುರಿತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ರೂಪಿಸಿರುವ ಹೊಸ ನಿಯಮಗಳನ್ನು ಗಣರಾಜ್ಯೋತ್ಸವ ದಿನದಂದು ಬಿಡುಗಡೆಗೊಳಿಸಲಾಯಿತು. ಬೌದ್ಧಿಕ ಅಸಾಮರ್ಥ್ಯರಿಗೆ ಮಾತ್ರ ನಿಯಮಗಳಲ್ಲಿ ಸಡಿಲಿಕೆ ನೀಡಲಾಗಿದೆ.

ಕಳೆದ ವರ್ಷ ನವೆಂಬರ್‌'ನಲ್ಲಿ ಸುಪ್ರೀಂ ಕೋರ್ಟ್ ನೀಡಿದ ಆದೇಶದಂತೆ ಸಿನಿಮಾ ಆರಂಭವಾಗುವ ಮುನ್ನ ರಾಷ್ಟ್ರಗೀತೆಯನ್ನು ಹಾಕಬೇಕು, ಆ ಸಂದರ್ಭದಲ್ಲಿ ಎಲ್ಲರೂ ಎದ್ದುನಿಂತು ಗೌರವ ನೀಡಬೇಕು ಎಂದಿತ್ತು. ದಿವ್ಯಾಂಗರು ರಾಷ್ಟ್ರಗೀತೆ ವೇಳೆ ಎದ್ದು ನಿಲ್ಲುವಂತಿಲ್ಲ ಎನ್ನುವ ತೀರ್ಪನ್ನು ಬದಲಾಯಿಸಿ ಕೋರ್ಟ್ ಡಿಸೆಂಬರ್‌'ನಲ್ಲಿ ಹೊಸ ಆದೇಶವನ್ನು ಹೊರಡಿಸಿತ್ತು, ಅದರಂತೆ ಕೇಂದ್ರ ಸರ್ಕಾರ ನಿಯಮಗಳನ್ನು ರೂಪಿಸಿ ಗಣರಾಜ್ಯೋತ್ಸವದಂದೇ ಪ್ರಕಟಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!