ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ ತಿದ್ದುಪಡಿಗೆ ಕಾರ್ಯಾಗಾರ

Published : Feb 04, 2017, 05:55 PM ISTUpdated : Apr 11, 2018, 12:59 PM IST
ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ ತಿದ್ದುಪಡಿಗೆ ಕಾರ್ಯಾಗಾರ

ಸಾರಾಂಶ

ದೌರ್ಜನ್ಯಕ್ಕೆ ಒಳಗಾದ ಮಕ್ಕಳನ್ನು ಹೇಗೆ ಆರೈಕೆ ಮಾಡಬೇಕು. ಅವರನ್ನು ಹೇಗೆ ಸೂಕ್ಷ್ಮತೆಯಿಂದ ಮಾತಾಡಿಸಬೇಕು. ವಿಚಾರಣೆಯನ್ನು ಹೇಗೆ ಮಾಡಬೇಕು ಅನ್ನುವುದರ ಬಗ್ಗೆ ಗಣ್ಯರು ಸಮಗ್ರವಾಗಿ ಚರ್ಚಿಸಿದರು.

ಬೆಂಗಳೂರು(ಫೆ.04): ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ 2012ಕ್ಕೆ ತಿದ್ದುಪಡಿ ತರಲು ಕಾರ್ಯಾಗಾರ ನಡೆಯಿತು.

ರಸ್ತೆ, ಬಸ್ ಗಳಲ್ಲಿ, ಶಾಲೆಗಳಲ್ಲಿ ಮಕ್ಕಳು ಲೈಂಗಿಕ ಕಿರುಕುಳಕ್ಕೊಳಗಾಗುತ್ತಿದ್ದಾರೆ. ಆದರೆ ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆ ಮಾತ್ರ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ 2012 ರ ಕಾಯ್ದೆಯನ್ನು ಇನ್ನಷ್ಟು ಕಠಿಣ ಹಾಗೂ ಇನ್ನು ಕೆಲ ನಿಯಮಗಳನ್ನು ತರುವ ಬಗ್ಗೆ ಕಾರ್ಯಾಗಾರದಲ್ಲಿ ಚರ್ಚಿಸಲಾಯಿತು.

ದೌರ್ಜನ್ಯಕ್ಕೆ ಒಳಗಾದ ಮಕ್ಕಳನ್ನು ಹೇಗೆ ಆರೈಕೆ ಮಾಡಬೇಕು. ಅವರನ್ನು ಹೇಗೆ ಸೂಕ್ಷ್ಮತೆಯಿಂದ ಮಾತಾಡಿಸಬೇಕು. ವಿಚಾರಣೆಯನ್ನು ಹೇಗೆ ಮಾಡಬೇಕು ಅನ್ನುವುದರ ಬಗ್ಗೆ ಗಣ್ಯರು ಸಮಗ್ರವಾಗಿ ಚರ್ಚಿಸಿದರು. ನಾಳೆಯೂ ಸಂವಾದ ಮುಂದುವರಿಯಲಿದ್ದು, ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಸಂಕ್ಷಿಪ್ತವಾಗಿ ಉಲ್ಲೇಖಿಸಿ ಸರ್ಕಾರಕ್ಕೆ ವರದಿ ನೀಡಲಾಗುತ್ತದೆ.

ಕಾರ್ಯಾಗಾರದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಸಂಘಟನೆಗಳು,ಪೊಲೀಸ್ ಅಧಿಕಾರಿಗಳು, ಪ್ರಸಿದ್ಧ ವಕೀಲರು ಹಾಗೂ ತಮಿಳುನಾಡು, ಮಹಾರಾಷ್ಟ್ರ, ಹರಿಯಾಣ, ಮುಂಬೈನ ನ್ಯಾಯಾಮೂರ್ತಿಗಳು ಭಾಗಿಯಾಗಿದ್ದರು.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ, ಶಾ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ
ಕಲಾಂಗೂ ಮುನ್ನ ರಾಷ್ಟ್ರಪತಿ ಹುದ್ದೆಗೆ ವಾಜಪೇಯಿ ಹೆಸರು!