
ನವದೆಹಲಿ (ಫೆ.01): ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು, ವಿವಿಧ ಆರೋಗ್ಯ ಸೇವೆಗಳಿಗೆ ಹೆಚ್ಚು ಒತ್ತು ನೀಡಲಾಗಿದೆ.
ಬಜೆಟ್ ಮಂಡಿಸಿದ ಹಣಕಾಸು ಸಚಿವ ಅರುಣ್ ಜೇಟ್ಲಿ ರಾಷ್ಟ್ರೀಯ ಆರೋಗ್ಯ ವಿಮಾ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯಿಂದ ಒಟ್ಟು 10 ಕೋಟಿ ಬಡ ಕುಟುಂಬಗಳು ಲಾಭವನ್ನು ಪಡೆದುಕೊಳ್ಳಲಿವೆ.
ಇದರಡಿಯಲ್ಲಿ ಒಂದು ಕಟುಂಬವು ಒಂದು ವರ್ಷಕ್ಕೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಪಡೆದುಕೊಳ್ಳಲಿದೆ. 50 ಕೋಟಿ ಜನರು ಆರೋಗ್ಯ ವಿಮಾ ಯೋಜನೆಯ ಅಡಿಯಲ್ಲಿ ಅನುಕೂಲವನ್ನು ಪಡೆದುಕೊಳ್ಳಲಿದ್ದಾರೆ.
ಇನ್ನು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವ ಟಿಬಿ ರೋಗಿಗಳಿಗೆ 600 ಕೋಟಿ ಮೀಸಲಿಡಲಾಗಿದೆ. 24 ಹೊಸ ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ತೆರೆಯುವ ಬಗ್ಗೆ ಬಜೆಟ್’ನಲ್ಲಿ ಘೋಷಿಸಲಾಗಿದೆ. ಜಿಲ್ಲಾಸ್ಪತ್ರೆಗಳನ್ನು ಉನ್ನತೀಕರಣಗೊಳಿಸುವುದಾಗಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.