
ನವದೆಹಲಿ: ಕಾಂಗ್ರೆಸ್ ಪಕ್ಷದ ಮುಖವಾಣಿ ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆಯನ್ನು ಪ್ರಕಟಿಸುವ ಅಸೋಸಿಯೇಟೆಡ್ ಜರ್ನಲ್ಸ್ ಲಿ.(ಎಜೆಎಲ್)ಗೆ ದೆಹಲಿಯಲ್ಲಿನ ಕಟ್ಟಡವನ್ನು 2 ವಾರಗಳಲ್ಲಿ ತೆರವುಗೊಳಿಸುವಂತೆ ದೆಹಲಿ ಹೈಕೋರ್ಟ್ ಸೂಚಿಸಿದೆ.
ಇದರೊಂದಿಗೆ ಕಟ್ಟಡ ತೆರವಿಗೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದೆ.
ಕಟ್ಟಡವನ್ನು ಪತ್ರಿಕೆ ಮುದ್ರಣಕ್ಕೆಂದು ಎಜೆಲ್ಗೆ ನೀಡಲಾಗಿತ್ತು. ಆದರೆ ಕಳೆದ 10 ವರ್ಷದಿಂದ ಕಟ್ಟಡದಲ್ಲಿ ಯಾವುದೇ ಮುದ್ರಣ ನಡೆಯುತ್ತಿಲ್ಲ ಎಂಬ ಕಾರಣ ನೀಡಿ ಕಳೆದ ಏಪ್ರಿಲ್ನಲ್ಲಿ ಕೇಂದ್ರ ಸರ್ಕಾರ ಕಟ್ಟಡ ತೆರವಿಗೆ ಸೂಚಿಸಿತ್ತು.
ಇದನ್ನು ಎಜೆಎಲ್ ಹೈಕೋರ್ಟ್ನಲ್ಲಿ ಪ್ರಶ್ನಿಸಿತ್ತು. 2018ರ ಸೆ.ನಿಂದ ಇಲ್ಲಿ ಪತ್ರಿಕೆ ಮುದ್ರಣ ಆರಂಭವಾಗಿದೆಯಾದರೂ, ಆದಾಗಲೇ ಪ್ರಕರಣ ತೀರ್ಪಿನ ಹಂತಕ್ಕೆ ಬಂದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.