'ಖೇಲ್ ರತ್ನ: ರಾಜೀವ್ ಧ್ಯಾನ ಬಿಡಿ, ಧ್ಯಾನ್ ಚಂದ್ ಹೆಸರು ಕೊಡಿ'

Published : Aug 29, 2018, 02:57 PM ISTUpdated : Sep 09, 2018, 09:19 PM IST
'ಖೇಲ್ ರತ್ನ: ರಾಜೀವ್ ಧ್ಯಾನ ಬಿಡಿ, ಧ್ಯಾನ್ ಚಂದ್ ಹೆಸರು ಕೊಡಿ'

ಸಾರಾಂಶ

ವಿಶ್ವ ಕಂಡ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರುತ್ತಿದ್ದೇವೆ. ಮಹಾನ್ ಕ್ರೀಡಾಪಟುವಿಗೆ ಗೌರವ ಮತ್ತು ನಮನ ಸಲ್ಲಿಕೆ ಮಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಬಿಜೆಪಿ ನಾಯಕ, ಶಾಸಕ ಸಿಟಿ ರವಿ ಮಾಡಿರುವ ಟ್ವೀಟ್ ವೊಂದು ಹೊಸ ಚರ್ಚೆ ಹುಟ್ಟುಹಾಕಿದೆ.

ಬೆಂಗಳೂರು(ಆ.29) ವಿಶ್ವವನ್ನೇ ಬೆರಗು ಮಾಡಿದ್ದ ಕ್ರೀಡಾಪಟು ಧ್ಯಾನ್ ಚಂದ್ ಹೆಸರನ್ನು ಶ್ರೇಷ್ಠ ಕ್ರೀಡಾ ಪುರಸ್ಕಾರವೊಂದಕ್ಕೆ ಇಡಬೇಕು ಎಂಬ ಮಾತು ಕೇಳಿ ಬಂದಿದೆ. ಬಿಜೆಪಿ ನಾಯಕ, ಶಾಸಕ ಸಿಟಿ ರವಿ ಮಾಡಿರುವ ಟ್ವೀಟ್ ಈ ಚರ್ಚೆಗೆ ನಾಂದಿ ಹಾಡಿದೆ

ಕ್ರೀಡಾ ದಿನದ ಈ ಸಂದರ್ಭದಲ್ಲಿ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿನಂತಿ ಮಾಡಿಕೊಳ್ಳುತ್ತಿದ್ದೇನೆ. ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನದ ಹೆಸರು ಬದಲಾಯಿಸಿ ಅದಕ್ಕೆ ಧ್ಯಾನ್ ಚಂದ್ ಹೆಸರಿಡಿ. ದೇಶ ಕಂಡ ಕೆಟ್ಟ ಆಡಳಿತಗಾರನ ಹೆಸರು ಬದಲಾಯಿಸಿ ಎಂದು ಕೋರಿದ್ದಾರೆ.

ಇದಕ್ಕೆ ಕೆಲವು ಪ್ರತಿಕ್ರಿಯೆಗಳು ಬಂದಿದೆ. ಧ್ಯಾನ್ ಚಂದ್ ಅವರಿಗೆ 1956ರಲ್ಲಿ ಪದ್ಮ ಭೂಷಣ ಪ್ರಶಸ್ತಿ ನೀಡಿ ಭಾರತ ಸರಕಾರ ಗೌರವಿಸಿತ್ತು.  1928, 1932 ಹಾಗೂ 1936ರಲ್ಲಿ ಒಲಿಂಪಿಕ್ ಚಿನ್ನದ ಪದಕವನ್ನು ಗೆದ್ದು ಕೊಟ್ಟಿರುವ ಧ್ಯಾನ್ ಚಂದ್ ಒಟ್ಟು 400 ಅಂತರಾಷ್ಟ್ರೀಯ ಗೋಲುಗಳನ್ನು ಬಾರಿಸಿದ್ದರು. ಹಾಗೆಯೇ 1948ರಲ್ಲಿ ತಮ್ಮ ವೃತ್ತಿ ಜೀವನಕ್ಕೆ ನಿವೃತ್ತಿ ಹಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!