ನವವೃಂದಾವನ ಪೂಜೆ: ಹೈಕೋರ್ಟ್ ಗೇ ಹೋಗಿ ಎಂದ ಸುಪ್ರೀಂ!

Published : Sep 26, 2018, 04:18 PM ISTUpdated : Sep 26, 2018, 04:24 PM IST
ನವವೃಂದಾವನ ಪೂಜೆ: ಹೈಕೋರ್ಟ್ ಗೇ ಹೋಗಿ ಎಂದ ಸುಪ್ರೀಂ!

ಸಾರಾಂಶ

ನವವೃಂದಾವನ ಪೂಜೆ ವಾರಸತ್ವ ಪ್ರಕರಣ! ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ನವವೃಂದಾವನ! ನವವೃಂದಾವನದ ಧಾರ್ಮಿಕ ವಾರಸತ್ವಕ್ಕೆ ನಡೆಯುತ್ತಿದ್ದ ಜಟಾಪಟಿ! ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠ, ಉತ್ತರಾದಿ ಮಠದ ಜಗಳ! ಪೂಜೆಯ ಹಕ್ಕನ್ನು ಕೋರಿ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದ ಉಭಯ ಮಠಗಳು! ಸಮಸ್ಯೆಯನ್ನು ಹೈಕೋರ್ಟ್​​ನಲ್ಲೇ ಬಗೆಹರಿಸಿಕೊಳ್ಳಲು ಸೂಚಿಸಿದ ಸುಪ್ರೀಂ ಕೋರ್ಟ್​

ನವದೆಹಲಿ(ಸೆ.26): ಮಹತ್ವದ ಬೆಳವಣಿಗೆಯೊಂದರಲ್ಲಿ ನವವೃಂದಾವನ ಪೂಜೆ ವಾರಸತ್ವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಸಮಸ್ಯೆಯನ್ನು ಹೈಕೋರ್ಟ್ ನಲ್ಲೇ ಬಗೆಹರಿಸಿಕೊಳ್ಳುವಂತೆ ಉಭಯ ಅರ್ಜಿದಾರರಿಗೂ ಸೂಚಿಸಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ನವವೃಂದಾವನದಲ್ಲಿ ಧಾರ್ಮಿಕ ವಾರಸತ್ವಕ್ಕೆ ಜಟಾಪಟಿ ನಡೆಯುತ್ತಿತ್ತು. ಧಾರ್ಮಿಕ ವಾರಸತ್ವಕ್ಕಾಗಿ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠ ಮತ್ತು ಉತ್ತರಾದಿ ಮಠ ಕೋರ್ಟ್ ಮೆಟ್ಟಿಲೇರಿದ್ದವು.

ಧಾರ್ಮಿಕ ವಾರಸತ್ವದ ಪೂಜೆಯ ಹಕ್ಕನ್ನು ಕೋರಿ ಉಭಯ ಮಠಗಳು ಸುಪ್ರೀಂ ಮೊರೆ ಹೋಗಿದ್ದವು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ಹೈಕೋರ್ಟ್ ನಲ್ಲೇ ಇತ್ಯರ್ಥಪಡಿಸಿಕೊಳ್ಳಿ ಎಂದು ಸೂಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

sculptor makeup: ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು