
ಭುವನೇಶ್ವರ್[ಮೇ.30]: ನರೇಂದ್ರ ಮೋದಿ ಅವರ ಅಲೆಯ ಹೊರತಾಗಿಯೂ ಒಡಿಶಾದಲ್ಲಿ ಬಿಜೆಡಿಯನ್ನು ಸತತ 5ನೇ ಬಾರಿಗೆ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾದ ನವೀನ್ ಪಟ್ನಾಯಕ್ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಇಡ್ಕೋ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಗಣೇಶಿಲಾಲ್ ಅವರು ನೂತನ ಸಿಎಂ ಮತ್ತು 20 ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಲೋಕಸಭೆಯ ಜೊತೆಗೇ ಒಡಿಶಾ ವಿಧಾನಸಭೆಗೂ ಚುನಾವಣೆ ನಡೆದಿದ್ದು, 147 ಸದಸ್ಯ ಬಲದ ವಿಧಾನಸಭೆಯಲ್ಲಿ 112 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಡಿ ಮತ್ತೆ ಅಧಿಕಾರಕ್ಕೆ ಬಂದಿತ್ತು.
ಉಳಿದಂತೆ ಬಿಜೆಪಿ 23, ಕಾಂಗ್ರೆಸ್ 9, ಪಕ್ಷೇತರರು 1, ಸಿಪಿಎಂ 1 ಸ್ಥಾನ ಗೆದ್ದುಕೊಂಡಿತ್ತು. ಒಂದು ಕ್ಷೇತ್ರದಲ್ಲಿ ಅಭ್ಯಥಿ ಸಾವಿನ ಕಾರಣ ಚುನಾವಣೆ ಮುಂದೂಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.