ಬಿಜೆಪಿಗೆ ರಾಜಿನಾಮೆ ನೀಡಿದ ನವಜೋತ್ ಸಿಂಗ್ ಸಿಧು

Published : Sep 14, 2016, 05:31 AM ISTUpdated : Apr 11, 2018, 01:06 PM IST
ಬಿಜೆಪಿಗೆ ರಾಜಿನಾಮೆ ನೀಡಿದ ನವಜೋತ್ ಸಿಂಗ್ ಸಿಧು

ಸಾರಾಂಶ

ಚಂಡಿಗಡ್ (ಸೆ.14): ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಭಾರತೀಯ ಜನತಾ ಪಕ್ಷಕ್ಕೆ ಇಂದು ರಾಜಿನಾಮೆ ನೀಡಿದ್ದಾರೆ.

"ರಾಜ್ಯಸಭೆಗೆ ರಾಜಿನಾಮೆ ನೀಡಿದಾಗ ಬಿಜೆಪಿಗೂ ರಾಜಿನಾಮೆ ನೀಡಿದಂತಾಗುತ್ತದೆ ಎಂದು ಸಿಧು ಭಾವಿಸಿದ್ದರು. ಜನರು ಸಾಮಾಜಿಕ ಜಾಲತಾಣಗಳಲ್ಲಿ ಸಿಧುರವರನ್ನು ಬಿಜೆಪಿಯಿಂದ ತೆಗೆದು ಹಾಕಲಾಗಿದೆ ಎಂದು ತಪ್ಪು ಮಾಹಿತಿಯನ್ನು ನೀಡುತ್ತಿದ್ದರು. ಹಾಗಾಗಿ ಔಪಚಾರಿಕವಾಗಿ ಬಿಜೆಪಿಗೆ ರಾಜಿನಾಮೆ ನೀಡುವ ಅಗತ್ಯವಿತ್ತು" ಎಂದು ಸಿಧು ಪತ್ನಿ ನವ್ ಜೋತ್ ಕೌರ್ ಹೇಳಿದ್ದಾರೆ.

ಮುಂದಿನ ವರ್ಷ ಪಂಜಾಬ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಹೀಗಾಗಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈಗಾಗಲೇ ರಾಜ್ಯಸಭಾ ಸ್ಥಾನಕ್ಕೆ ಗುಡ್ ಬೈ ಹೇಳಿ ಆವಾಜ್-ಈ-ಪಂಜಾಬ್ ಪಕ್ಷವನ್ನು ಸ್ಥಾಪಿಸಿ ಚುನಾವಣೆಗೆ ರಣತಂತ್ರ ಹೆಣೆಯುತ್ತಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು