
ಚಂಢೀಗಡ(ಜೂ.08): ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದು, ನವಜೋತ್ ಸಿಂಗ್ ಸಿಧು ತಮ್ಮನ್ನು ನೈಜ ಕಾಂಗ್ರೆಸ್ಸಿಗ ಎಂದು ಬಿಂಬಿಸಿಕೊಳ್ಳಲು ಯತ್ನಿಸಿದ್ದರು.
ಆದರೆ ಚುನಾವಣೆ ಮುಗಿದು ಕಾಂಗ್ರೆಸ್ ಹಣೆಬರಹ ಗೊತ್ತಾದ ಮೇಲೆ, ಸಿಧು ಮೆಲ್ಲಗೆ ಅಸಮಾಧಾನದ ಹೊಸ ನಾಟಕ ಶುರು ಮಾಡಿದಂತಿದೆ.
ಪಂಜಾಬ್ ಸಿಎಂ ಕ್ಯಾ. ಅಮರೀಂದರ್ ಸಿಂಗ್ ಹಾಗೂ ಸಿಧು ನಡುವಿನ ಮುಸುಕಿನ ಗುದ್ದಾಟ ಇದೀಗ ನವದೆಹಲಿ ತಲುಪಿದೆ. ತಮ್ಮ ಖಾತೆ ಕಿತ್ತುಕೊಂಡು ಮತ್ತೊಂದು ಖಾತೆ ನೀಡಿರುವ ಸಿಎಂ ನಡೆಯನ್ನು ಸಿಧು ಖಂಡಿಸಿದ್ದಾರೆ.
ಇತ್ತೀಚಿಗೆ ನಡೆದ ಸಂಟುಪ ಪುನರ್ ರಚನೆ ಸಂದರ್ಭದಲ್ಲಿ ಸಿಧು ಅವರಿಗೆ ಸ್ಥಳೀಯ ಸರ್ಕಾರ ಇಲಾಖೆ ಖಾತೆ ಬದಲಿಗೆ ಇಂಧನ ಖಾತೆ ನೀಡಲಾಗಿದೆ. ಆದರೆ ಈ ಹೊಸ ಖಾತೆಯ ಹೊಣೆ ವಹಿಸಿಕೊಳ್ಳಲು ಅವರು ನಿರಾಕರಿಸಿದ್ದಾರೆ.
ಅಲ್ಲದೇ ಸಿಎಂ ಅಮರೀಂದರ್ ಸಿಂಗ್ ನಡುವಿನ ಮುಸುಕಿನ ಗುದ್ದಾಟದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಲು ಸಿಧು ದೆಹಲಿಗೆ ದೌಡಾಯಿಸಿದ್ದಾರೆ.
ಒಂದು ವೇಳೆ ಮರಳಿ ಅಧಿಕಾರವನ್ನು ಕೊಡಿಸುವಲ್ಲಿ ಪಕ್ಷದ ನಾಯಕರು ವಿಫಲರಾದರೆ ಸಂಪುಟದಿಂದ ಹೊರಗೆ ಉಳಿಯಲು ಸಿಧು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ತಮ್ಮನ್ನು ಹಗುರವಾಗಿ ಪರಿಗಣಿಸದಂತೆ ಎಚ್ಚರಿಕೆ ನೀಡಿರುವ ಸಿಧು, ಅವಶ್ಯಕತೆ ಬಿದ್ದರೆ ಸರ್ಕಾರದಿಂದ ಹೊರನಡೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.