ಕೇರಳ: ಮನೆ ಮೇಲೆ ಹೆಲಿಕಾಪ್ಟರ್ ಇಳಿಸಿದ ಪೈಲಟ್‌ ಬಿಚ್ಚಿಟ್ಟ ಸತ್ಯವಿದು

Published : Aug 21, 2018, 10:59 AM ISTUpdated : Sep 09, 2018, 09:47 PM IST
ಕೇರಳ:  ಮನೆ ಮೇಲೆ ಹೆಲಿಕಾಪ್ಟರ್ ಇಳಿಸಿದ ಪೈಲಟ್‌ ಬಿಚ್ಚಿಟ್ಟ ಸತ್ಯವಿದು

ಸಾರಾಂಶ

ಪ್ರವಾಹಕ್ಕೆ ಸಿಲುಕಿದ್ದ ಕೇರಳದ ಮನೆಯೊಂದರ ಮೇಲ್ಚಾವಣಿಯ ಮೇಲೆ ಹೆಲಿಕಾಪ್ಟರ್‌ ಇಳಿಸಿ ಸಂತ್ರಸ್ತರನ್ನು ರಕ್ಷಿಸಿದ ಫೈಲಟ್ ಇದೀಗ ಈ ಬಗ್ಗೆ ಸತ್ಯವೊಂದನ್ನು ಬಿಚ್ಚಿಟ್ಟಿದ್ದಾರೆ. 

ಮುಂಬೈ: ಪ್ರವಾಹಕ್ಕೆ ಸಿಲುಕಿದ್ದ ಕೇರಳದ ಮನೆಯೊಂದರ ಮೇಲ್ಚಾವಣಿಯ ಮೇಲೆ ಹೆಲಿಕಾಪ್ಟರ್‌ ಇಳಿಸಿ ಸಂತ್ರಸ್ತರನ್ನು ರಕ್ಷಿಸುವಾಗ ಸಣ್ಣ ತಪ್ಪಾಗಿದ್ದರೂ ಮೂರು ಸೆಕೆಂಡ್‌ಗಳಲ್ಲಿ ಹೆಲಿಕಾಪ್ಟರ್‌ ಪುಡಿಪುಡಿಯಾಗುತ್ತಿತ್ತು! ಹೌದು, ಕೇರಳದ ಚಾಲಕುಡಿ ಪಟ್ಟಣದಲ್ಲಿ ಮನೆಯ ಟೆರೇಸ್‌ ಮೇಲೆ ಹೆಲಿಕಾಪ್ಟರ್‌ ಇಳಿಸಿ 26 ಜನರನ್ನು ರಕ್ಷಿಸಿದ ಘಟನೆಯನ್ನು ಪೈಲಟ್‌ ಹೀಗೆ ವಿವರಿಸಿದ್ದಾರೆ. ‘ಮನೆಯ ಮೇಲೆ ಸಂಪೂರ್ಣ ಭಾರ ಹಾಕದೇ ಬಹುತೇಕ ಭಾರ ಗಾಳಿಯಲ್ಲಿ ಇರುವಂತೆ ನೊಡಿಕೊಳ್ಳಲಾಯಿತು. ತಾಂತ್ರಿಕವಾಗಿ ಇದನ್ನು ‘ಲೈಟ್‌ ಆನ್‌ ವೀಲ್‌ ಎಂದು ಕರೆಯಲಾಗುತ್ತದೆ.

ಈ ಪ್ರಕ್ರಿಯೆಯ ಮೂಲಕ ಹೆಲಿಕಾಪ್ಟರ್‌ ಅನ್ನು ಟೆರೇಸ್‌ ಮೇಲೆ ಇಳಿಸುವ ನಿರ್ಧಾರ ಕೈಗೊಂಡೆ ಎಂದು ಲೆ.ಕಮಾಂಡರ್‌ ಅಭಿಜಿತ್‌ ಗರುಡ್‌ ಹೇಳಿದ್ದಾರೆ. ‘ನಾಲ್ವರನ್ನು ಹಗ್ಗದ ಮೂಲಕ ಹೆಲಿಕಾಪ್ಟರ್‌ಗೆ ಹತ್ತಿಸಿಕೊಂಡ ಬಳಿಕ ಉಳಿದ 22 ಮಂದಿಯನ್ನು ಒಳಕ್ಕೆ ಕರೆದುಕೊಳ್ಳುವುದು ಸವಾಲಿನ ವಿಷಯವಾಗಿತ್ತು. ಹೆಲಿಕಾಪ್ಟರ್‌ ಸಿಬ್ಬಂದಿ ಕೆಳಗಿಳಿದು ಎಲ್ಲರನ್ನೂ ಹೆಲಿಕಾಪ್ಟರ್‌ಗೆ ಹತ್ತಿಸಿದರು.

ಸಿಬ್ಬಂದಿಯ ಸಹಕಾರ ಇಲ್ಲದೇ ಇದ್ದಿದ್ದರೆ ಇದು ಸಾಧ್ಯವಾಗುತ್ತಲೇ ಇರಲಿಲ್ಲ. ಲೆ.ರಜನೀಶ್‌ (ಸಹ ಪೈಲಟ್‌), ಲೆ. ಸತ್ಯಾಥ್‌ (ನಾವಿಕ) ಅಜಿತ್‌ (ಹಗ್ಗದ ಮೂಲಕ ಮೇಲೆ ಎತ್ತುವ ಸಿಬ್ಬಂದಿ) ಮತ್ತು ರಾಜನ್‌ (ಡೈವರ್‌) ಅವರ ಸಹಕಾರದಿಂದ ಈ ರಕ್ಷಣಾ ಕಾರ್ಯ ಸಾಧ್ಯವಾಯಿತು. ಒಂದು ವೇಳೆ ಸ್ವಲ್ಪವೇ ಪ್ರಮಾದವಾಗಿದ್ದರೂ ಮೂರು ಸೆಕೆಂಡ್‌ಗಳಲ್ಲಿ ಹೆಲಿಕಾಪ್ಟರ್‌ ಪುಡಿ ಪುಡಿಯಾಗುತ್ತಿತ್ತು. ಸರಿಯಾದ ನಿರ್ಧಾರ ಕೈಗೊಂಡಿದ್ದಕ್ಕೆ ನನಗೆ ಹೆಮ್ಮೆ ಇದೆ’ ಎಂದು ಪೈಲಟ್‌ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!
ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ