
ಬೆಂಗಳೂರು ಜೂನ್ 13: ಬೆಂಗಳೂರು ಮೂಲದ ಶಂಕತ ನಕ್ಸಲ್ ಒಬ್ಬನ್ನನ್ನು ಛತ್ತೀಸ್ ಗಢ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ. ಸಾಮಾಝಿಕ ತಾಣದಲಲ್ಲಿ ಸಕ್ರಿಯವಾಗಿ ನಕ್ಸಲ್ ವಿಚಾರ ಹರಿಬಿಡುತ್ತಿದ್ದ ಟೆಕ್ಕಿ ದೇವದಾಸ್ ನಾಯಕ್ ಬಂಧಿತ ಶಂಕಿತ.
ಬಂಧಿತ ಆರೋಪಿಯಿಂದ ನಕ್ಸಲ್ ಚಟುವಟಿಕೆಗಳಿಗೆ ಬಳಸುತ್ತಿದ್ದ ವಸ್ತುಗಳ ವಶಕ್ಕೆ ಪಡೆಯಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ಪ್ರಚೋದನೆ ನೀಡುತ್ತಿರುವುದರ ಜತೆಗೆ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿ ಸೋಮಸೇನ್ ಜತೆಯೂ ದೇವದಾಸ್ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.
ಈ ಮೊದಲು ಮಾಹಿತಿ ಕಲೆ ಹಾಕಿದ ಛತ್ತೀಸ್ ಗಡ ಪೊಲೀಸರು ಆರೋಪಿ ಅಭಯ್ ದೇವದಾಸ್ ನನ್ನ ಬಂಧಿಸಲು ಬೆಂಗಳೂರಿನ ಮನೆ ಮೇಲೆ ದಾಳಿ ಮಾಡಿದ್ದರು. ಆದರೆ ದೇವದಾಸ್ ಸಿಕ್ಕಿರಲಿಲ್ಲ. ಆರೋಪಿ ಮನೆಯಿಂದ ನಕ್ಸಲ್ ಚಟುವಟಿಕೆಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.
ಆರೋಪಿ 15ಕ್ಕೂ ಅಧಿಕ ದೇಶಗಳನ್ನು ಸುತ್ತಿದ್ದು ನಕ್ಸಲ್ ಗೆ ಸಂಬಂಧಿಸಿದ ವಿಚಾರಗಳನ್ನು ನಿರಂತರವಾಗಿ ಸಾಮಾಜಿಕ ತಾಣದಲ್ಲಿ ಪ್ರಚೋದನಕಾರಿಯಾಗಿ ಬಿಂಬಿಸುವ ಯತ್ನ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಪ್ರಕರಣಕ್ಕೆ ಸಂಬಂಧಿಸಿ ಸ್ಪಷ್ಟ ಪ್ರತಿಕ್ರಿಯೆ ನೀಡಲು ಬೆಂಗಳೂರು ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ನಿರಾಕರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.