ಕೊಡಗು ಜಿಲ್ಲೆಯಲ್ಲಿ ನಕ್ಸಲರು ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

Published : Feb 03, 2018, 10:56 AM ISTUpdated : Apr 11, 2018, 12:44 PM IST
ಕೊಡಗು ಜಿಲ್ಲೆಯಲ್ಲಿ ನಕ್ಸಲರು ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ಸಾರಾಂಶ

ಕೊಡಗು  ಜಿಲ್ಲೆಯ ಮಡಿಕೇರಿ ಗಡಿ ಗ್ರಾಮದಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ. ದಕ್ಷಿಣ ಕನ್ನಡ, ಕೊಡಗಿನ ಗಡಿ ಗ್ರಾಮವಾದ ಕೊಯನಾಡು ಪ್ರದೇಶದಲ್ಲಿ ನಕ್ಸಲಿಯರು ಸುಳಿದಾಡುತ್ತಿದ್ದಾರೆ.

ಮಡಿಕೇರಿ : ಕೊಡಗು  ಜಿಲ್ಲೆಯ ಮಡಿಕೇರಿ ಗಡಿ ಗ್ರಾಮದಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ. ದಕ್ಷಿಣ ಕನ್ನಡ, ಕೊಡಗಿನ ಗಡಿ ಗ್ರಾಮವಾದ ಕೊಯನಾಡು ಪ್ರದೇಶದಲ್ಲಿ ನಕ್ಸಲಿಯರು ಸುಳಿದಾಡುತ್ತಿದ್ದಾರೆ.

ಈ ಗ್ರಾಮದ ಮೂರು ಮನೆಗೆ ಬಂದಿದ್ದ ನಕ್ಸಲರು ವಿವಿಧ ರೀತಿಯಾದ ದವಸ-ಧಾನ್ಯಗಳನ್ನು ಸಂಗ್ರಹಿಸಿಕೊಂಡು ತೆರಳಿದ್ದಾರೆ. ಅಲ್ಲದೇ  ಇದೇ ಗ್ರಾಮದ ಯುವಕನೊಬ್ಬನಿಗೆ 2700 ರು. ಹಣವನ್ನು ನೀಡಿ ವಿವಿಧ ಅಡುಗೆ ಸಾಮಾಗ್ರಿಗಳನ್ನು ಖರೀದಿ ಮಾಡಿದ್ದಾರೆ ಎನ್ನಲಾಗಿದೆ.

ಅಲ್ಲದೇ ಇಲ್ಲಿಂದ ಹೋಗುವ ಮುನ್ನ ಜೀವ ಬೆದರಿಕೆಯನ್ನು ಒಡ್ಡಿದ್ದಾರೆ. ಪೊಲೀಸರಿಗೆ ತಮ್ಮ ಬಗ್ಗೆ ಮಾಹಿತಿ ನೀಡಿದಲ್ಲಿ ಸಮಸ್ಯೆ ಎದುರಿಸುತ್ತೀರಾ ಎಂದು ಬೆದರಿಸಿದ್ದಾರೆ ಎನ್ನಲಾಗಿದೆ.

ಅಲ್ಲದೇ ಅವರ ಬ್ಯಾಗ್’ನಲ್ಲಿ ವಿವಿಧ ರೀತಿಯಾದ ಶಸ್ತ್ರಾಸ್ತ್ರಗಳನ್ನು ಇರಿಸಿಕೊಂಡಿದ್ದರು ಎಂದು ಗ್ರಾಮಸ್ಥರು ಹೇಳಿದ್ದು, ನಕ್ಸಲರ ಆಗಮನದಿಂದ ಇಲ್ಲಿನ ಜನರು ತೀವ್ರ ಆತಂಕಗೊಂಡಿದ್ದಾರೆ.

ಅಲ್ಲದೇ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಸಂಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಓಲಾ ಸ್ಕೂಟರ್ಸ್‌ ಮಾತ್ರವಲ್ಲ, ಸರ್ವೀಸ್‌ ವಿಚಾರದಲ್ಲಿ ಮೋಟಾರ್‌ಸೈಕಲ್‌ದೂ ಅದೇ ಕಥೆ!
ಬಿಜೆಪಿಯವರೇನು ಸೂಟ್‌ಕೇಸ್‌ ಕೊಟ್ಟು ಕಳುಹಿಸುತ್ತಿದ್ರಾ?: ಸಚಿವ ಸಂತೋಷ್‌ ಲಾಡ್‌ ತಿರುಗೇಟು