ಡಿಡಿ ಪತ್ರಕರ್ತನ ಸಾವು ಅನಿರೀಕ್ಷಿತ ಮತ್ತು ಖೇದಕರ: ನಕ್ಸಲರ ಪತ್ರ!

Published : Nov 02, 2018, 11:57 AM ISTUpdated : Nov 02, 2018, 12:31 PM IST
ಡಿಡಿ ಪತ್ರಕರ್ತನ ಸಾವು ಅನಿರೀಕ್ಷಿತ ಮತ್ತು ಖೇದಕರ: ನಕ್ಸಲರ ಪತ್ರ!

ಸಾರಾಂಶ

ದಂತೇವಾಡ ದಾಳಿ ಕುರಿತಂತೆ ಪತ್ರ ಬಿಡುಗಡೆ ಮಾಡಿದ ನಕ್ಸಲರು! ದೂರದಶರ್ಶನ ಕ್ಯಾಮರಾಮ್ಯಾನ್ ಸಾವಿಗೆ ನಕ್ಸಲರ ಕಂಬನಿ! ಪತ್ರಕರ್ತನನ್ನು ಹತ್ಯೆ ಮಾಡುವ ಉದ್ದೇಶ ಇರಲಿಲಲ್ಲ ಎಂದ ನಕ್ಸಲರು! ಪೊಲೀಸರ ಜೊತೆ ದೂರದರ್ಶನ ತಂಡ ಇತ್ತೆಂದು ಗೊತ್ತಿರಲಿಲ್ಲ! ಪತ್ರಕರ್ತರು ಪೊಲೀಸರ ಜೊತೆ ಇರಬೇಡಿ ಎಂದು ನಕ್ಸಲರ ಮನವಿ  

ನವದೆಹಲಿ(ನ.2): ದಂತೇವಾಡ ದಾಳಿ ಕುರಿತಂತೆ ನಕ್ಸಲರು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಮಾಧ್ಯಮಗಳ ಮೇಲೆ ದಾಳಿ ಮಾಡುವ ಉದ್ದೇಶವಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಕೆಲ ದಿನಗದಳ ಹಿಂದಷ್ಟೇ ದಂತೇವಾಡದಲ್ಲಿ ನಕ್ಸಲರು ಭೀಕರ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಲ್ಲದೇ ದೂರದರ್ಶನದ ಕ್ಯಾಮೆರಾಮ್ಯಾನ್ ಅಚ್ಯುತಾನಂದನ್ ಸಾಹು ಕೂಡ ಮೃತಪಟ್ಟಿದ್ದರು. 

ಘಟನೆ ಕುರಿತಂತೆ ಇದೀಗ ನಕ್ಸಲರು ಎರಡು ಪುಟಗಳ ಹೇಳಿಕೆ ಬಿಡುಗಡೆ ಮಾಡಿದ್ದು, ಪ್ರತೀನಿತ್ಯ ನಮ್ಮ ಗ್ರಾಮದ ಮೇಲೆ ದಾಳಿ ನಡೆಯುತ್ತಲೇ ಇರುತ್ತದೆ. ಸ್ಥಳೀಯರನ್ನು ಥಳಿಸಲಾಗುತ್ತಿರುತ್ತದೆ. ನಕಲಿ ಎನ್ ಕೌಂಟರ್ ಗಳಲ್ಲಿ ಜನರನ್ನು ಪೊಲೀಸರು ಹತ್ಯೆ ಮಾಡುತ್ತಿರುತ್ತಾರೆ. ರಾಜಕೀಯ ಪಕ್ಷಗಳು ಮಾಧ್ಯಮಗಳನ್ನು ತಪ್ಪು ಹಾದಿಗೆಳೆಯುತ್ತಿವೆ ಎಂದು ಕಿಡಿ ಕಾರಿದ್ದಾರೆ. 

ಇನ್ನು ಅಚ್ಯುತಾನಂದನ್ ಸಾಹು ಸಾವಿಗೆ ಖೇದ ವ್ಯಕ್ತಪಡಿಸಿರುವ ನಕ್ಸಲರು, ಪೊಲೀಸ್ ತಂಡದಲ್ಲಿ ದೂರದರ್ಶನ ತಂಡ ಕೂಡ ಇರುತ್ತದೆ ಎಂಬುದು ನಮಗೆ ಗೊತ್ತಿರಲಿಲ್ಲ. ಹೀಗಾಗಿ ದಾಳಿಯಲ್ಲಿ ಅಚ್ಯುತಾನಂದ್ ಸಾಹು ಸಾವನ್ನಪ್ಪಿದ್ದಾರೆ. ಉದ್ದೇಶಪೂರ್ವಕವಾಗಿ ನಾವು ಎಂದಿಗೂ ಯಾವುದೇ ಪತ್ರಕರ್ತರನ್ನು ಹತ್ಯೆ ಮಾಡಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಲ್ಲದೇ ಪತ್ರಕರ್ತರು ಪೊಲೀಸರೊಂದಿಗೆ ಇರಬಾರದೆಂದು ನಕ್ಸಲರು ಪತ್ರದಲ್ಲಿ ಮನವಿ ಮಾಡಿದ್ದಾರೆ. ನಮ್ಮ ಹೋರಾಟಡ ವ್ಯವಸ್ಥೆಯ ವಿರುದ್ಧವೇ ಹೊರತು ವ್ಯಕ್ತಿಗಳ ವಿರುದ್ಧ ಅಲ್ಲ ಎಂದು ನಕ್ಸಲರು ಸ್ಪಷ್ಟಪಡಿಸಿದ್ದಾರೆ.

ಇನ್ನು ನಕ್ಸಲರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ದಂತೇವಾಡ ಪೊಲೀಸ್ ಅಧಿಕಾರಿ ಅಭಿಷೇಕ್ ಪಲ್ಲವ್,  ದಾಳಿ ನಡೆಯುವುದಕ್ಕೂ ಮುನ್ನ ಸಾಕ್ಷ್ಯಾಧಾರಗಳು ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗಿದ್ದವು. ಪತ್ರಕರ್ತರನ್ನು ಹತ್ಯೆ ಮಾಡುವ ಉದ್ದೇಶವಿಲ್ಲದಿದ್ದರೆ, ಕ್ಯಾಮೆರಾವನ್ನೇಕೆ ಹೊತ್ತೊಯ್ದರು ಎಂದು ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!