
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡ ಭೂ ಗಳ್ಳರ ಮೇಲೆ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ , ಸರ್ಕಾರ ಸ್ಪಷ್ಟನೆ ನೀಡಬೇಕು ಅಂತ ನಮ್ಮ ಬೆಂಗಳೂರು ಫೌಂಡೇಶನ್ ಒತ್ತಾಯಿಸಿದೆ.
ನಗರದ ಪ್ರೆಸ್ ಕ್ಲಬ್ ನಲ್ಲಿ ಇಂದು ಯುನೈಟೆಡ್ ಬೆಂಗಳೂರು ಹಾಗೂ ನಮ್ಮ ಬೆಂಗಳೂರು ಪ್ರತಿಷ್ಠಾನ ಜಂಟಿ ಸುದ್ದಿಗೋಷ್ಠಿ ನಡೆಸಿದ್ರು. ವಿ.ಬಾಲಸುಬ್ರಣಿಯನ್ ಅಧ್ಯಕ್ಷತೆಯ ಸರ್ಕಾರಿ ಭೂಮಿ ರಕ್ಷಣಾ ಸಮಿತಿ 27 ಸಾವಿರದ 336 ಎಕರೆ ನಗರ ವ್ಯಾಪ್ತಿಯಲ್ಲಿ ಒತ್ತುವರಿ ಆಗಿದೆ ಅಂತಾ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆದ್ರೆ ರಾಜ್ಯ ಸರ್ಕಾರ ಮಾತ್ರ 15 ಸಾವಿರದ 833 ಎಕರೆ ಭೂಮಿಯನ್ನು ವಶಕ್ಕೆ ಪಡೆದಿದ್ದೇವೆ ಅಂತಾ ಹೇಳುತ್ತಿದೆ.ಈ ಎರಡು ವ್ಯತಿರಿಕ್ತ ಅಂಕಿಅಂಶಗಳು ನಡುವೆ ವತ್ಯಾಸ ಕಂಡು ಬರುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಒತ್ತುವರಿದಾರು, ಭೂಗಳ್ಳರು ಹಾಗೂ ಇವರಿಗೆ ಸಹಕರಿಸಿದ ಅಧಿಕಾರಿಗಳ ಮೇಲೆ ತೆಗೆದುಕೊಂಡ ಕ್ರಮಗಳನ್ನು ಬಹಿರಂಗಪಡಿಸಬೇಕೆಂದು ಒತ್ತಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.