ರಾಜ್ಯದಲ್ಲಿ ಎನ್‌ಸಿಪಿ ಸ್ಪರ್ಧೆ: ಜೆಡಿಎಸ್‌’ನೊಂದಿಗೆ ಮೈತ್ರಿ?

Published : Feb 15, 2018, 07:46 AM ISTUpdated : Apr 11, 2018, 12:39 PM IST
ರಾಜ್ಯದಲ್ಲಿ ಎನ್‌ಸಿಪಿ ಸ್ಪರ್ಧೆ: ಜೆಡಿಎಸ್‌’ನೊಂದಿಗೆ ಮೈತ್ರಿ?

ಸಾರಾಂಶ

ಮಹಾರಾಷ್ಟ್ರದಲ್ಲಿ ಪ್ರಬಲವಾಗಿರುವ ಅಲ್ಲಿನ ಮಾಜಿ ಮುಖ್ಯಮಂತ್ರಿ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ (ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ) ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ.

ಬೆಂಗಳೂರು :ಮಹಾರಾಷ್ಟ್ರದಲ್ಲಿ ಪ್ರಬಲವಾಗಿರುವ ಅಲ್ಲಿನ ಮಾಜಿ ಮುಖ್ಯಮಂತ್ರಿ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ (ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ) ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ.

ಎನ್‌ಸಿಪಿ ಈ ಬಾರಿ ರಾಜ್ಯದ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಹೊಂದಿದ್ದು, ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಸಿದೆ. ಆದರೆ, ಹೊಂದಾಣಿಕೆ ಸಾಧ್ಯವಾಗದಿದ್ದರೆ ಏಕಾಂಗಿಯಾಗಿ ಸ್ಪರ್ಧಿಸುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಒಟ್ಟಿನಲ್ಲಿ ಚುನಾವಣೆಯಲ್ಲಿ ಕಣಕ್ಕಿಳಿಯುವ ಬಗ್ಗೆ ಬಹುತೇಕ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸಲಾಗಿದೆ. ಪಕ್ಷದ ಅಧ್ಯಕ್ಷ ಶರದ್‌ ಪವಾರ್‌ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಚುನಾವಣೆ ಸ್ಪರ್ಧೆ ಮತ್ತು ಹೊಂದಾಣಿಕೆ ಬಗ್ಗೆ ಚರ್ಚೆ ನಡೆಯಲಿದೆ. ರಾಜ್ಯದ ಮುಂಬೈ ಕರ್ನಾಟಕ ಭಾಗದಲ್ಲಿ ಎನ್‌ಸಿಪಿಯ ತುಸು ಪ್ರಭಾವ ಕಂಡು ಬರುತ್ತಿದ್ದು, ಆ ಭಾಗದಲ್ಲಿ ಸ್ಪರ್ಧಿಸುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ಸಂಗ್ರಹ ಮಾಡಲಿದೆ ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾ ಚೆನ್ನಾಗಿಲ್ಲ, ನಾ ಬಿಳಿ ಇಲ್ಲ, ನನ್ನ ಕುರೂಪಿ ಅಂತಾರೆ: ಪುಟ್ಟ ಮಗಳ ಅಳು ಕೇಳಲಾಗದೇ ನೆಟ್ಟಿಗರ ಸಲಹೆ ಕೇಳಿದ ತಾಯಿ
ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಬಂಗಾರಕ್ಕೆ ಕನ್ನ! 85 ಗುಂಡು ಕೊಟ್ಟರೆ 77 ಮಾತ್ರ ವಾಪಸ್