ಕಾಂಗ್ರೆಸ್ ಗೆಲುವಿಗೆ ಮತ್ತೆರಡು ಪಕ್ಷಗಳ ಬೆಂಬಲ?

Published : Aug 08, 2018, 10:41 AM IST
ಕಾಂಗ್ರೆಸ್ ಗೆಲುವಿಗೆ ಮತ್ತೆರಡು ಪಕ್ಷಗಳ ಬೆಂಬಲ?

ಸಾರಾಂಶ

ವಿಪಕ್ಷಗಳ ಅಭ್ಯರ್ಥಿ ಗೆಲುವಿಗೆ ಇದೀಗ ಮತ್ತೆರಡು ಪಕ್ಷಗಳು ಬೆಂಬಲ ನೀಡುವ ಸಾಧ್ಯತೆ ಇದೆ. ರಾಜ್ಯಸಭಾ ಉಪ ಸಭಾಪತಿ ಹುದ್ದೆಗೆ ನಡೆಯುವ ಚುನಾವಣೆಗೆ ಇದೀಗ ಶಿವಸೇನೆ ಹಾಗೂ ಬಿಜೆಡಿ ಬೆಂಬಲ ಪಡೆದುಕೊಳ್ಳುವ ಯತ್ನ ನಡೆದಿದೆ. 

ನವದೆಹಲಿ:  ರಾಜ್ಯಸಭೆಯ ಉಪ ಸಭಾಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ)ಯ ವಂದನಾ ಚವಾಣ್‌ರನ್ನು ಆಯ್ಕೆ ಮಾಡಲಾಗಿದೆ. 

ವಂದನಾರನ್ನು ಗೆಲ್ಲಿಸುವು ದಕ್ಕಾಗಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಬಿಜೆಡಿಯ ನವೀನ್ ಪಟ್ನಾಯಕ್ ಮತ್ತು ಶಿವಸೇನೆ ಬೆಂಬಲ ಪಡೆಯಲು ಮುಂದಾಗಿದ್ದಾರೆ. 

ಮುಂಬೈ ಉಗ್ರ ದಾಳಿಯಲ್ಲಿ ಮಡಿದ ಅಶೋಕ್ ಕಾಮ್ಟೆ ಪತ್ನಿ ವಿನಿತಾ ಕಾಮ್ಟೆಯವರ ಸಹೋದರಿ ವಂದನಾ ಕಾಮ್ಟೆ. ಮತ್ತೊಂದೆಡೆ ಎನ್‌ಡಿಎ ಮೈತ್ರಿಕೂಟದಲ್ಲಿ ಜೆಡಿಯು ಸಂಸದ ಹರಿವಂಶ ನಾರಾಯಣ್ ಸಿಂಗ್ ರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ