
ನವದೆಹಲಿ[ಅ.04]: ಎನ್ ಡಿಎ ಆಡಳಿತದಲ್ಲಿರುವ ರಾಜ್ಯಗಳ ಜನರಿಗೆ ಡಬಲ್ ಲಾಭ ಸಿಗಲಿದೆ. ಅಂದರೆ ಎನ್ ಡಿಎ ಅಧಿಕಾರ ನಡೆಸುತ್ತಿರುವ ರಾಜ್ಯಗಳು 2.5 ರೂ. ಕಡಿಮೆ ಮಾಡಲಿವೆ. ಅಲ್ಲಿಗೆ ತೈಲ ದರ 5 ರೂ. ಕಡಿಮೆ ಆದಂತೆ ಆಗುತ್ತದೆ.
ಮಹಾರಾಷ್ಟ್ರ, ಗುಜರಾತ್ ನಂತರ ಛತ್ತೀಸ್ ಘಡ, ಜಾರ್ಖಂಡ್, ತ್ರಿಪುರಾ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ, ಅಸ್ಸಾಂ, ಉತ್ತರಾಖಾಂಡ್ ಸಹ 2.5 ರೂ ಕಡಿಮೆ ಮಾಡಲು ಒಪ್ಪಿಗೆ ನೀಡಿವೆ. ಗವರ್ನರ್ ಆಳ್ವಿಕೆಯಲ್ಲಿರುವ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ದರ ಕಡಿಮೆಯಾಗಲಿದೆ.
ಕಚ್ಚಾ ತೈಲ ದರ ದಿನೇ ದಿನೇ ಹೆಚ್ಚಳವಾಗುತ್ತಿದೆ. ಜಗತ್ತಿನ ಎಲ್ಲ ಮಾರುಕಟ್ಟೆಗಳ ಮೇಲೆ ತೈಲದರ ಹೆಚ್ಚಳ ಪರಿಣಾಮ ಬೀರುತ್ತಿದೆ. ಈ ಎಲ್ಲ ಬೆಳವಣಿಗೆ ಕುರಿತು ಇಲಾಖೆಯಲ್ಲಿ ಚರ್ಚೆ ನಡೆಸಲಾಗಿದೆ. ಹಣಕಾಸು ಮತ್ತು ಪೆಟ್ರೋಲಿಯಂ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ. ಜನಸಮಾನ್ಯರಿಗೆ ನೆರವಾಗಲು ಪ್ರತಿಯೊಂದು ರಾಜ್ಯಗಳು ಮುಂದೆ ಬರಬೇಕು ಎಂದು ಜೇಟ್ಲಿ ಮನವಿ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.