ವಿಷಯುಕ್ತ ನೀರು ಸೇವಿಸಿ 35ಕ್ಕೂ ಹೆಚ್ಚು ಕುರಿ ಸಾವು

Published : Aug 27, 2017, 09:13 PM ISTUpdated : Apr 11, 2018, 12:42 PM IST
ವಿಷಯುಕ್ತ ನೀರು ಸೇವಿಸಿ 35ಕ್ಕೂ ಹೆಚ್ಚು ಕುರಿ ಸಾವು

ಸಾರಾಂಶ

ರಸ್ತೆಯಲ್ಲೇ ಕರ್ನಾಟಕ ಉಗ್ರಾಣ ನಿಗಮದ ಗೋದಾಮು ಇದ್ದು, ಇಲ್ಲಿ ದಾಸ್ತಾನು ಇರಿಸಿದ್ದ ಅಕ್ಕಿ, ಗೋದಿಗೆ ಸಿಂಪಡಿಸಿದ್ದ ಕೀಟನಾಶಕ ಗುಂಡಿಯ ನೀರಿಗೆ ಸೇರಿದ್ದು ಅದನ್ನು ಕುರಿಗಳು ಸೇವಿಸಿದ್ದರಿಂದ ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕಲಬುರಗಿ(ಆ.27): ರಾಸಾಯನಿಕ ಮಿಶ್ರಿಯ ನೀರು ಸೇವಿಸಿ ಮೂವತ್ತೈದಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿರುವ ಘಟನೆ ಕಲಬುರಗಿ ಹೊರ ವಲಯದ ನೃಪತುಂಗ ಕಾಲೋನಿಯ ಬಳಿಯ ನಂದೂರ-ಕೆಸರಟಗಿ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ನಡೆದಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದ ಶರಬಣ್ಣ ಸೈಬಣ್ಣ ಅವರು ಸಂಜೆ ಕೈಗಾರಿಕಾ ಪ್ರದೇಶದ ಮಾರ್ಗವಾಗಿ ತಮ್ಮ ಕುರಿಗಳನ್ನು ಹೊಡೆದುಕೊಂಡು ಬರುತ್ತಿದ್ದರು. ಈ ವೇಳೆ ಗುಂಡಿ ಯೊಂದರಲ್ಲಿ ನಿಂತಿದ್ದ ಮಳೆ ನೀರು ಸೇವಿಸಿ ಸ್ಥಳದಲ್ಲೇ 35ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ಘಟನಾ ಸ್ಥಳಕ್ಕೆ ವಿವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ರಸ್ತೆಯಲ್ಲೇ ಕರ್ನಾಟಕ ಉಗ್ರಾಣ ನಿಗಮದ ಗೋದಾಮು ಇದ್ದು, ಇಲ್ಲಿ ದಾಸ್ತಾನು ಇರಿಸಿದ್ದ ಅಕ್ಕಿ, ಗೋದಿಗೆ ಸಿಂಪಡಿಸಿದ್ದ ಕೀಟನಾಶಕ ಗುಂಡಿಯ ನೀರಿಗೆ ಸೇರಿದ್ದು ಅದನ್ನು ಕುರಿಗಳು ಸೇವಿಸಿದ್ದರಿಂದ ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!
ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!