ಕಾಶ್ಮೀರ ಸಮಸ್ಯೆಗೆ ಮೋದಿಯಲ್ಲ, ನೆಹರೂ ಕಾರಣ: ವೆಂಕಯ್ಯ ನಾಯ್ಡು

Published : Feb 26, 2017, 11:12 AM ISTUpdated : Apr 11, 2018, 01:08 PM IST
ಕಾಶ್ಮೀರ ಸಮಸ್ಯೆಗೆ ಮೋದಿಯಲ್ಲ, ನೆಹರೂ ಕಾರಣ: ವೆಂಕಯ್ಯ ನಾಯ್ಡು

ಸಾರಾಂಶ

ಕಾಶ್ಮೀರ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿ ಅಥವಾ ಎನ್’ಡಿಏ ಸರ್ಕಾರ ಹೊಣೆಯಲ್ಲ ಬದಲಾಗಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ ತಪ್ಪು ಧೋರಣೆಗಳೇ ಕಾರಣವೆಂದು ನಾಯ್ಡು ಹೇಳಿದ್ದಾರೆ.

ನವದೆಹಲಿ (ಫೆ.26): ಕಾಶ್ಮೀರ ಸಮಸ್ಯೆಗೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಪಿ,ಚಿದಂಬರಂ ಅವರ ಹೇಳಿಕೆಯನ್ನು ರಾಜಕೀಯ ಪ್ರೇರಿತ ಎಂದು ಬಣ್ಣಿಸಿರುವ ಕೇಂದ್ರ ವಾರ್ತಾ ಸಚಿವ ವೆಂಕಯ್ಯ ನಾಯ್ಡು, ಆ ಕುರಿತು ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಹೇಳಿದ್ದಾರೆ.

ಕಾಶ್ಮೀರ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿ ಅಥವಾ ಎನ್’ಡಿಏ ಸರ್ಕಾರ ಹೊಣೆಯಲ್ಲ ಬದಲಾಗಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ ತಪ್ಪು ಧೋರಣೆಗಳೇ ಕಾರಣವೆಂದು ನಾಯ್ಡು ಹೇಳಿದ್ದಾರೆ.

ಚಿದಂಬರಂ ಹೇಳಿಕೆಯು ಬೇಜವಾಬ್ದಾರಿತನದಿಂದ ಕೂಡಿದೆ ಹಾಗೂ ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ. ಆದುದರಿಂದ ಕಾಂಗ್ರೆಸ್ ಪಕ್ಷವು ಕಾಶ್ಮೀರ ಕುರಿತು ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು, ಎಂದು ನಾಯ್ಡು ಹೇಳಿದ್ದಾರೆ.

ಕಾಂಗ್ರೆಸ್ ಸುಮಾರು ವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರದಲ್ಲಿತ್ತು. ಕಾಶ್ಮೀರ ಸಮಸ್ಯೆ ಬಗೆಹರಿಸಲು ಅವರು ಏನು ಮಾಡಿದ್ದಾರೆ? ಈಗ ಅಧಿಕಾರ ಕಳೆದುಕೊಂಡ ಬಳಿಕ ಕೀಳು ಮಟ್ಟದ ರಾಜಕೀಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ನಾಯ್ಡು ಕಿಡಿಕಾರಿದ್ದಾರೆ.

ಕಳೆದ ಶುಕ್ರವಾರ ಹೈದರಬಾದ’ನಲ್ಲಿ ಕಾರ್ಯಕ್ರಮವೊಂದರಲ್ಲಿ, ಕಾಶ್ಮೀರದಲ್ಲಿ ಭಿನ್ನಾಭಿಪ್ರಾಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ಅಗತ್ಯಕ್ಕಿಂತ ಹೆಚ್ಚು ಬಲಪ್ರಯೋಗ ಮಾಡುವ ಮೂಲಕ ಭಾರತವು ಕಾಶ್ಮೀರವನ್ನು  ಬಹುತೇಕವಾಗಿ ಕಳದುಕೊಂಡಿದೆಯೆಂದು ಚಿದಂಬರಂ ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ: ಡಿ.ಕೆ.ಶಿವಕುಮಾರ್ ಹೇಳಿಕೆ ಹಾಟ್ ಟಾಪಿಕ್!
ತೋಷಖಾನಾ–2 ಪ್ರಕರಣ: ಇಮ್ರಾನ್ ಖಾನ್–ಬುಷ್ರಾ ಬೀಬಿಗೆ ತಲಾ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ ಕೋರ್ಟ್!