ನೆ.ಲ.ನರೇಂದ್ರಬಾಬು ಬಿಜೆಪಿ ಸೇರ್ಪಡೆ

Published : Oct 01, 2017, 09:35 PM ISTUpdated : Apr 11, 2018, 01:11 PM IST
ನೆ.ಲ.ನರೇಂದ್ರಬಾಬು ಬಿಜೆಪಿ ಸೇರ್ಪಡೆ

ಸಾರಾಂಶ

ಮಾಜಿ ರಾಜ್ಯ ಮಾಹಿತಿ ಆಯುಕ್ತ ಶಂಕರ ಆರ್. ಪಾಟೀಲ್​, ನಿವೃತ್ತ ಡಿವೈಎಸ್​ಪಿ ಸೋಮಶೇಖರ ಛಬ್ಬಿ, ಸಾಮಾಜಿಕ ಕಾರ್ಯಕರ್ತ ಎಂ.ಜಿ. ರಂಗಧಾಮಯ್ಯ ಮತ್ತು ಕೆಲವು ಕಿರುತೆರೆ ನಟಿಯರು ಮತ್ತು ವಕೀಲರು ಕೂಡಾ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬೆಂಗಳೂರು(ಅ. 01): ಮಹಾಲಕ್ಷ್ಮೀ ಲೇಔಟ್​'ನ ಮಾಜಿ ಶಾಸಕ ಹಾಗೂ ಮಾಜಿ ಕಾಂಗ್ರೆಸ್ ಮುಖಂಡ ನೆ.ಲ. ನರೇಂದ್ರಬಾಬು ಇಂದು ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನರೇಂದ್ರಬಾಬು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಮುರಳೀಧರ ರಾವ್​, ವಿಧಾನಸಭೆ ವಿಪಕ್ಷ ಉಪನಾಯಕ ಆರ್. ಅಶೋಕ್​ ಸೇರಿದಂತೆ ಹಲವು ಬಿಜೆಪಿ ಮುಖಂಡರು ಈ ವೇಳೆ ಉಪಸ್ಥಿತರಿದ್ದರು. ಇದೇ ವೇಳೆ, ಮಾಜಿ ರಾಜ್ಯ ಮಾಹಿತಿ ಆಯುಕ್ತ ಶಂಕರ ಆರ್. ಪಾಟೀಲ್​, ನಿವೃತ್ತ ಡಿವೈಎಸ್​ಪಿ ಸೋಮಶೇಖರ ಛಬ್ಬಿ, ಸಾಮಾಜಿಕ ಕಾರ್ಯಕರ್ತ ಎಂ.ಜಿ. ರಂಗಧಾಮಯ್ಯ ಮತ್ತು ಕೆಲವು ಕಿರುತೆರೆ ನಟಿಯರು ಮತ್ತು ವಕೀಲರು ಕೂಡಾ ಬಿಜೆಪಿ ಸೇರ್ಪಡೆಯಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌