ಆಧಾರ್‌-ಮೊಬೈಲ್‌ ಲಿಂಕ್‌ ಮಾಡಲು ನಾವು ಹೇಳಿಲ್ಲ: ಸುಪ್ರೀಂ

Published : Apr 27, 2018, 08:00 AM IST
ಆಧಾರ್‌-ಮೊಬೈಲ್‌ ಲಿಂಕ್‌ ಮಾಡಲು ನಾವು ಹೇಳಿಲ್ಲ: ಸುಪ್ರೀಂ

ಸಾರಾಂಶ

ಮೊಬೈಲ್‌ ಸಂಖ್ಯೆಗೆ ಆಧಾರ್‌ ಕಡ್ಡಾಯ ಮಾಡಲು ಸುಪ್ರೀಂಕೋರ್ಟ್‌ ಆದೇಶ ನೀಡಿದೆ ಎಂಬ ನೆಪ ಹೇಳಿ ಮೊಬೈಲ್‌ ನಂಬರ್‌-ಆಧಾರ್‌ ಲಿಂಕ್‌ ಮಾಡಿಸುವುದು ಕಡ್ಡಾಯ ಎಂಬ ಆದೇಶ ಹೊರಡಿಸಿದ್ದ ಕೇಂದ್ರ ಸರ್ಕಾರಕ್ಕೆ ಮುಖಭಂಗವಾಗಿದೆ.

ನವದೆಹಲಿ :  ಮೊಬೈಲ್‌ ಸಿಮ್‌ ಹಾಗೂ ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆಯನ್ನು ಕಡ್ಡಾಯ ಮಾಡಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ನಲ್ಲಿ ದೊಡ್ಡ ಮುಜುಗರವಾಗಿದೆ. ಈ ಹಿಂದೆ, ಮಾರ್ಚ್ 31ರೊಳಗೆ ಮೊಬೈಲ್‌ ಸಂಖ್ಯೆ ಹಾಗೂ ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಕಡ್ಡಾಯ ಎಂಬ ಕೇಂದ್ರ ಸರ್ಕಾರದ ಆದೇಶವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದ ಸುಪ್ರೀಂಕೋರ್ಟ್‌, ಇದೀಗ ಮೊಬೈಲ್‌ ಸಂಖ್ಯೆಗೆ ಆಧಾರ್‌ ಜೋಡಿಸುವುದು ಕಡ್ಡಾಯ ಎಂದು ತಾನು ಯಾವತ್ತೂ ಹೇಳಿಯೇ ಇರಲಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಅದರೊಂದಿಗೆ, ಮೊಬೈಲ್‌ ಸಂಖ್ಯೆಗೆ ಆಧಾರ್‌ ಕಡ್ಡಾಯ ಮಾಡಲು ಸುಪ್ರೀಂಕೋರ್ಟ್‌ ಆದೇಶ ನೀಡಿದೆ ಎಂಬ ನೆಪ ಹೇಳಿ ಮೊಬೈಲ್‌ ನಂಬರ್‌-ಆಧಾರ್‌ ಲಿಂಕ್‌ ಮಾಡಿಸುವುದು ಕಡ್ಡಾಯ ಎಂಬ ಆದೇಶ ಹೊರಡಿಸಿದ್ದ ಕೇಂದ್ರ ಸರ್ಕಾರಕ್ಕೆ ಮುಖಭಂಗವಾಗಿದೆ.

2017ರ ಫೆಬ್ರವರಿ 6ರಂದು ನಾವು ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನು ಕೇಂದ್ರ ಸರ್ಕಾರ ತಪ್ಪಾಗಿ ಅರ್ಥೈಸಿಕೊಂಡಿದೆ. ಮೊಬೈಲ್‌ ಸಿಮ್‌ಗೆ ಆಧಾರ್‌ ಜೋಡಿಸುವಂತೆ ಸುಪ್ರೀಂಕೋರ್ಟ್‌ ಯಾವತ್ತೂ ನಿರ್ದೇಶನ ನೀಡಿರಲಿಲ್ಲ. ಆದರೆ, ನಾವು ನಿರ್ದೇಶನ ನೀಡಿದ್ದೇವೆ ಎಂದು ಕೇಂದ್ರ ಸರ್ಕಾರದ ಸುತ್ತೋಲೆ ಹೇಳುತ್ತಿದೆ. ಅದು ತಪ್ಪು ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರ ಪೀಠ ಬುಧವಾರ ಸ್ಪಷ್ಟನೆ ನೀಡಿತು.

ಫೆ.6ರಂದು ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಂದಿನ ಅಟಾರ್ನಿ ಜನರಲ್‌ ಮುಕುಲ್‌ ರೋಹಟ್ಗಿ ಅವರು, ಗ್ರಾಹಕರ ಗುರುತು ತಪಾಸಣೆಗೆ ಆಧಾರ್‌ ಕೂಡ ಒಂದು ದಾಖಲೆ. ಮೊಬೈಲ್‌ ಗ್ರಾಹಕರ ಗುರುತು ತಪಾಸಣೆಗೆ ಆದಷ್ಟುಬೇಗ ಒಂದು ಪರಿಣಾಮಕಾರಿ ಯೋಜನೆ ಪ್ರಕಟಿಸಲಾಗುವುದು ಮತ್ತು ತಪಾಸಣೆಯನ್ನು ಒಂದು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದರು. ಅದನ್ನು ನಾವು ದಾಖಲಿಸಿಕೊಂಡಿದ್ದೆವು ಅಷ್ಟೆ. ಅದನ್ನು ಕೇಂದ್ರ ಸರ್ಕಾರ ತಪ್ಪಾಗಿ ಅರ್ಥೈಸಿಕೊಂಡು ಆಧಾರ್‌ ಜೋಡಣೆ ಕಡ್ಡಾಯ ಎಂಬ ಆದೇಶ ಹೊರಡಿಸಿದೆ ಎಂದು ಪೀಠ ಹೇಳಿತು.

ಈ ವರ್ಷದ ಮಾಚ್‌ರ್‍ 31ರೊಳಗೆ ಮೊಬೈಲ್‌ ಸಂಖ್ಯೆ ಹಾಗೂ ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಕಡ್ಡಾಯ ಎಂದು ಕಳೆದ ವರ್ಷ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಮಾಚ್‌ರ್‍ 13ರಂದು ಸುಪ್ರೀಂಕೋರ್ಟ್‌ ಬ್ಯಾಂಕ್‌ ಖಾತೆ ಹಾಗೂ ಮೊಬೈಲ್‌ ಸಂಖ್ಯೆಗೆ ಆಧಾರ್‌ ಜೋಡಣೆಯ ಗಡುವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿತ್ತು. ಇದಕ್ಕೂ ಮುನ್ನ ಬ್ಯಾಂಕು ಹಾಗೂ ಮೊಬೈಲ್‌ ಸೇವಾ ಕೇಂದ್ರಗಳಲ್ಲಿ ಆಧಾರ್‌ ಜೋಡಣೆ ಮಾಡಿಸಲು ಗ್ರಾಹಕರ ನೂಕುನುಗ್ಗಲು ಉಂಟಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Cobra snake in CM House: ನೂತನ ಮುಖ್ಯಮಂತ್ರಿ ಮನೆಗೆ ಬಂದ ನಾಗರಹಾವು; ಉರಗ ತಜ್ಞರಿಂದ ರಕ್ಷಣೆ!
India Tour: ಭಾರತದ ಪ್ರಸಿದ್ಧ ಪ್ರವಾಸಿ ತಾಣವಾದ ಕಸೋಲ್‌ನಲ್ಲಿ ಪ್ರವಾಸಿಗರ ಮೈ ಜುಮ್ಮೆನಿಸುವ ಹುಚ್ಚಾಟ!