
ನವದೆಹಲಿ(ಡಿ.25): ಹೊಸ ವರ್ಷಕ್ಕೆ ದೇಶದ ಜನತೆಗೆ ಭರ್ಜರಿ ಗಿಫ್ಟ್ ಕೊಡಲು ಮುಂದಾಗಿರುವ ರೈಲ್ವೇ ಇಲಾಖೆ, ರಾಮಸೇತುವಿನಿಂದ ಧನುಸ್ ಕೋಡಿಗೆ ರೈಲು ಸಂಪರ್ಕ ಕಲ್ಪಿಸುವ ನಿರ್ಧಾರ ಕೈಗೊಂಡಿದೆ.
ರಾಮೇಶ್ವರಂ-ಧನುಸ್ ಕೋಡಿ ನಡುವಿನ 17 ಕಿ.ಮೀ. ಉದ್ದದ ಹೊಸ ಬ್ರಾಡ್ಗೇಜ್ ರೈಲು ಹಳಿ ನಿರ್ಮಾಣ ಕಾರ್ಯಕ್ಕೆ ರೈಲ್ವೇ ಇಲಾಖೆ ಒಪ್ಪಿಗೆ ನೀಡಿದೆ. ಒಟ್ಟು 208 ಕೋಟಿ ರೂ. ವೆಚ್ಚದಲ್ಲಿ ಈ ಹಳಿ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.
1964ರಲ್ಲಿ ರಾಮೇಶ್ವರಂನಲ್ಲಿ ಸಂಭವಿಸಿದ್ದ ಭೀಕರ ಚಂಡಮಾರುತದಲ್ಲಿ ಧನುಸ್ ಕೋಡಿ ರೈಲು ನಿಲ್ದಾಣ ನಾಶವಾಗಿತ್ತು. ಆದರೆ ಈ ರೈಲು ನಿಲ್ದಾಣದ ದುರಸ್ತಿ ಕಾರ್ಯ ಮಾಡಿಯೇ ಇರಲಿಲ್ಲ.
ಇದೀಗ ಮತ್ತೆ ಈ ರೈಲು ನಿಲ್ದಾಣವನ್ನು ನಿರ್ಮಿಸಿ ರಾಮಸೇತುವಿಗೆ ರೈಲು ಸಂಪರ್ಕ ಕಲ್ಪಿಸಲು ಇಲಾಖೆ ಮುಂದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.