ಎಚ್ಡಿಕೆ ನೇತೃತ್ವದ ಕ್ಯಾಬ್ ಸೇವೆ: ಹೆಸರು ನಮ್ಮ ಟೈಗರ್

Published : Aug 01, 2017, 09:53 AM ISTUpdated : Apr 11, 2018, 01:03 PM IST
ಎಚ್ಡಿಕೆ ನೇತೃತ್ವದ ಕ್ಯಾಬ್ ಸೇವೆ: ಹೆಸರು ನಮ್ಮ ಟೈಗರ್

ಸಾರಾಂಶ

ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಯ ಓಲಾ ಮತ್ತು ಉಬರ್ ಸಂಸ್ಥೆಗಳಿಗೆ ಸಡ್ಡು ಹೊಡೆದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಚಾಲಕರೇ ಸೇರಿ ಆರಂಭಿಸುತ್ತಿರುವ ಆ್ಯಪ್ ಆಧಾರಿತ ಕ್ಯಾಬ್ ಸೇವೆಗೆ ಕೊನೆಗೂ ಹೆಸರು ಅಂತಿಮವಾಗಿದೆ.

ಬೆಂಗಳೂರು(ಅ.01): ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಯ ಓಲಾ ಮತ್ತು ಉಬರ್ ಸಂಸ್ಥೆಗಳಿಗೆ ಸಡ್ಡು ಹೊಡೆದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಚಾಲಕರೇ ಸೇರಿ ಆರಂಭಿಸುತ್ತಿರುವ ಆ್ಯಪ್ ಆಧಾರಿತ ಕ್ಯಾಬ್ ಸೇವೆಗೆ ಕೊನೆಗೂ ಹೆಸರು ಅಂತಿಮವಾಗಿದೆ.

ಎಚ್‌ಡಿಕೆ ಹೆಸರಿನ ಬದಲು ನಮ್ಮ ಟೈಗರ್’ ಕ್ಯಾಬ್ ಎಂದು ಹೆಸರಿಡಲಾಗಿದೆ. ಈ ಮೊದಲು ಎಚ್ಡಿಕೆ ಕ್ಯಾಬ್ ಎಂದು ಹೆಸರಿಡಲು ಚಾಲಕ ಮುಖಂಡರು ನಿರ್ಧರಿಸಿದ್ದರು. ಆದರೆ, ಎಚ್ .ಡಿ. ಕುಮಾರಸ್ವಾಮಿ ಅವರು ತಮ್ಮ ಹೆಸರಿನ ಬದಲು ಬೇರೊಂದು ಹೆಸರು ಇಡುವಂತೆ ಸೂಚಿಸಿದ್ದರು. ಅದರಂತೆ ಸುದೀರ್ಘ ಚರ್ಚೆ ಯ ಬಳಿಕ ‘ನಮ್ಮ ಟೈಗರ್’ ಕ್ಯಾಬ್ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ನೂತನ ಕ್ಯಾಬ್ ಸೇವೆ ಆಗಸ್ಟ್ 15ರೊಳಗೆ ಸಾರ್ವಜನಿಕ ಸೇವೆಗೆ ಮುಕ್ತವಾಗುವ ಸಾಧ್ಯತೆಯಿದೆ.

ಸ್ಟಾರ್ಟ್‌ಆ್ಯಪ್ ಮಾದರಿಯ ‘ಹುಲಿ ಟೆಕ್ನಾಲಜಿಸ್’ ಎಂಬ ಕಂಪನಿ ಆರಂಭಿಸಿದ್ದು, ಇದರ ನಿರ್ವಹಣೆಯ ಹೊಣೆಯನ್ನು ಎಸ್‌ಡಿಪಿಎಲ್ ಎಂಬ ಸಂಸ್ಥೆಗೆ ವಹಿಸಲಾಗಿದೆ. ನಾಗವಾರ ಮತ್ತು ಹೆಣ್ಣೂರು ನಡುವಿನ ರಿಂಗ್ ರಸ್ತೆಯಲ್ಲಿ ನೂತನ ಕಚೇರಿ ನಿರ್ಮಾಣ ಕಾರ್ಯಭರದಿಂದ ಸಾಗಿದೆ ಎಂದು ಹುಲಿ ಟೆಕ್ನಾಲಜಿಸ್‌ನ ಮುಖ್ಯಸ್ಥ ತನ್ವೀರ್ ಪಾಷಾ ‘ಕನ್ನಡ ಪ್ರಭಕ್ಕೆ ತಿಳಿಸಿದರು. ಈಗಾಗಲೇ ನಮ್ಮ ಸಂಸ್ಥೆಯ ಅಡಿಯಲ್ಲಿ ಕ್ಯಾಬ್ ಸೇವೆ ನೀಡಲು ಸುಮಾರು 25 ಸಾವಿರ ಚಾಲಕರು ಮುಂದೆ ಬಂದಿದ್ದಾರೆ. ಸೇವೆ ಆರಂಭಗೊಂಡ ಬಳಿಕ ಮತ್ತಷ್ಟು ಚಾಲಕರು ಸಂಸ್ಥೆಗೆ ಸೇರುವ ನಿರೀಕ್ಷೆಯಿದೆ. ಚಾಲಕರಿಗೆ ಇತರೆ ಕ್ಯಾಬ್ ಸೇವಾ ಸಂಸ್ಥೆಗಳು ನೀಡುತ್ತಿರುವ ಸೌಲಭ್ಯಗಳಿಗಿಂತ ಉತ್ತಮವಾದ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದೇವೆ. ಅಗಸ್ಟ್ ಮೊದಲ ಅಥವಾ ಎರಡನೇ ವಾರದಿಂದ ಸಂಸ್ಥೆಗೆ ಕ್ಯಾಬ್ ಗಳನ್ನು ಅಟ್ಯಾಚ್ ಮಾಡಿಕೊಳ್ಳುವ ಪ್ರಕ್ರಿಯೆ ಆರಂಭವಾಗಲಿದೆ. ಕಾರಿನ ಸ್ಥಿತಿ, ದಾಖಲೆಗಳ ಪರಿಶೀಲನೆ, ಪರವಾನಗಿ, ವಾಹನ ವಿಮೆ ಮೊದಲಾದ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಕ್ಯಾಬ್‌'ಗಳನ್ನು ಸಂಸ್ಥೆಗೆ ಅಟ್ಯಾಚ್ ಮಾಡಿಕೊಳ್ಳಲಾಗುವುದು ಎಂದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆನೆಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ರೈಲು, 7 ಗಜ ಬಲಿ
ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ