ಮೋದಿ ಸ್ವಚ್ಛ ಭಾರತ್‌ ಆಯ್ತು, ಈಗ ತ್ಯಾಜ್ಯ ನಿರ್ವಹಣೆ ಅಭಿಯಾನ

Published : May 29, 2017, 12:40 PM ISTUpdated : Apr 11, 2018, 12:38 PM IST
ಮೋದಿ ಸ್ವಚ್ಛ ಭಾರತ್‌ ಆಯ್ತು, ಈಗ ತ್ಯಾಜ್ಯ ನಿರ್ವಹಣೆ ಅಭಿಯಾನ

ಸಾರಾಂಶ

ವಿಶ್ವ ಪರಿಸರ ದಿನವಾದ ಜೂ.5ರಂದು ತ್ಯಾಜ್ಯ ನಿರ್ವಹಣೆಗೆ ಸಂಬಂಧಿ​ಸಿದ ಬೃಹತ್‌ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಮೋದಿ ಘೋಷಿಸಿದ್ದಾರೆ. ಈ ಯೋಜನೆಯಡಿ ದೇಶದ 4 ಸಾವಿರ ನಗರಗಳಲ್ಲಿ ಘನ ಹಾಗೂ ದ್ರವ ತ್ಯಾಜ್ಯ ಸಂಗ್ರಹಣ ವಿಧಾನಗಳನ್ನು ಆರಂಭಿಸಲಾಗುತ್ತದೆ

ನವದೆಹಲಿ: ಕೇಂದ್ರ ಸರ್ಕಾರ ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರ್ಣಗೊಳಿಸಿದ ಬೆನ್ನಲ್ಲೇ ಮತ್ತೊಂದು ಸ್ವಚ್ಛತಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಜ್ಜಾಗುತ್ತಿದ್ದಾರೆ. ರಾಜ್ಯ ಸರ್ಕಾರಗಳು ಹಾಗೂ ಜನಪ್ರತಿನಿಧಿಗಳ ನೆರವಿನೊಂದಿಗೆ ವಿಶ್ವ ಪರಿಸರ ದಿನವಾದ ಜೂ.5ರಂದು ತ್ಯಾಜ್ಯ ನಿರ್ವಹಣೆಗೆ ಸಂಬಂಧಿ​ಸಿದ ಬೃಹತ್‌ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಈ ಯೋಜನೆಯಡಿ ದೇಶದ 4 ಸಾವಿರ ನಗರಗಳಲ್ಲಿ ಘನ ಹಾಗೂ ದ್ರವ ತ್ಯಾಜ್ಯ ಸಂಗ್ರಹಣ ವಿಧಾನಗಳನ್ನು ಆರಂಭಿಸಲಾಗುತ್ತದೆ ಎಂದು ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌'ನಲ್ಲಿ ಭಾನುವಾರ ಅವರು ತಿಳಿಸಿದರು.
ಭಾನುವಾರ ವೀರ ಸಾವರ್ಕರ್‌ ಅವರ ಜನ್ಮದಿನವೂ ಆಗಿದ್ದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಸೇನಾನಿಯನ್ನು ಪ್ರಧಾನಿ ಮೋದಿಯವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬ್ಯಾನರ್ ಗಲಾಟೆ ಕೇಸ್‌: ಚಾರ್ಜ್ ಕೊಡದೆ ಪಟ್ಟು ಹಿಡಿದ ಡಿವೈಎಸ್‌ಪಿ? ಐಪಿಎಸ್ ಅಧಿಕಾರಿ ವರ್ಗಾವಣೆಯೇ ರದ್ದು!
ಸಿಎಂ ಡಿಸಿಎಂ ಫೋಟೋ ಬಳಸಿ ಬಿಜೆಪಿ 'ಸ್ಕ್ಯಾಮ್ ಲಾರ್ಡ್' ಪೋಸ್ಟ್: ಸೈಬರ್ ಕ್ರೈಂ ಠಾಣೆ ಮೆಟ್ಟಿಲೇರಿದ ಕಾಂಗ್ರೆಸ್