ಕೆಲಸ ಮಾಡದ ಜನ ಪ್ರತಿನಿಧಿಗಳನ್ನು ವಾಪಸ್ ಕರೆಸಿಕೊಳ್ಳುವ ಹಕ್ಕು ಜನರಿಗೆ..!

Published : Dec 16, 2017, 01:42 PM ISTUpdated : Apr 11, 2018, 12:35 PM IST
ಕೆಲಸ ಮಾಡದ ಜನ ಪ್ರತಿನಿಧಿಗಳನ್ನು ವಾಪಸ್ ಕರೆಸಿಕೊಳ್ಳುವ ಹಕ್ಕು ಜನರಿಗೆ..!

ಸಾರಾಂಶ

ಇನ್ನು 7 ವರ್ಷದಲ್ಲಿ ನಿರ್ಮಾಣವಾಗಲಿರುವ ಆಂಧ್ರಪ್ರದೇಶದ ನೂತನ ರಾಜಧಾನಿ ಅಮರಾವತಿಯ ನಗರಾಡಳಿತಕ್ಕೆ ಪ್ರತ್ಯೇಕ ನಿಯಮಗಳನ್ನು ರಚಿಸಲಾಗಿದೆ.

ಅಮರಾವತಿ(ಡಿ.16): ಕೆಲಸ ಮಾಡದ ಜನಪ್ರತಿನಿಧಿಗಳನ್ನು ವಾಪಸು ಕರೆಸಿಕೊಳ್ಳುವ (ರೈಟ್ ಟು ರೀಕಾಲ್) ಹಕ್ಕನ್ನು ಮತದಾರರಿಗೆ ಕೊಡಿ ಎಂಬುದು ಹಳೆಯ ಬೇಡಿಕೆ. ಆದರೆ ಇದು ಭಾರತದಲ್ಲಿ ಈಗಿನ ಮಟ್ಟಿಗಂತೂ ಜಾರಿಯಾಗುವ ಸಾಧ್ಯತೆ ಇಲ್ಲವಾದರೂ ಆಂಧ್ರಪ್ರದೇಶದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ರಾಜಧಾನಿ ಅಮರಾವತಿಯಲ್ಲಿ ಜಾರಿಯಾಗುವ ನಿರೀಕ್ಷೆ ಇದೆ.

ಕಾರಣ, ಇನ್ನು 7 ವರ್ಷದಲ್ಲಿ ನಿರ್ಮಾಣವಾಗಲಿರುವ ಆಂಧ್ರಪ್ರದೇಶದ ನೂತನ ರಾಜಧಾನಿ ಅಮರಾವತಿಯ ನಗರಾಡಳಿತಕ್ಕೆ ಪ್ರತ್ಯೇಕ ನಿಯಮಗಳನ್ನು ರಚಿಸಲಾಗಿದೆ.

 ಇದರಲ್ಲಿ ಕೆಲಸ ಮಾಡದ ಜನಪ್ರತಿನಿಧಿಗಳು ಮತ್ತು ಸರ್ಕಾರದ ಅಧಿಕಾರಿಗಳನ್ನು ಜನರಿಗೆ `ವಾಪಸ್ ಕರೆಸಿಕೊಳ್ಳುವ' ವಿಶೇಷ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ. ಆಂಧ್ರಪ್ರದೇಶ ಪ್ರಾದೇಶಿಕ ಅಭಿವೃದ್ಧಿ ಪ್ರಾಕಾರ ಈ ಪೂರ್ವಭಾವಿ ನಿಯಮಗಳನ್ನು ರಚನೆ ಮಾಡಿದ್ದು, ಶುಕ್ರವಾರ ಆರಂಭವಾಗಿರುವ 2 ದಿನಗಳ ಕಾರ್ಯಾಗಾರದಲ್ಲಿ ನಿಯಮಗಳ ಪ್ರತಿ ವಿತರಿಸಲಾಗಿದೆ.

ಈ ವಿಶೇಷಾಕಾರದಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜವಾಬ್ದಾರಿ ಹೆಚ್ಚುವ ನಿರೀಕ್ಷೆ ಹೊಂದಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ಷರ ಲೋಕದ ಅವಧಾನಿ: ಕನ್ನಡ ಅಧ್ಯಾಪಕ ಜಿ.ಬಿ.ಹರೀಶರ ಪತ್ರಿಕಾ ಪ್ರತಿಭೆ
ನಿಮ್ಮ ಆರೋಗ್ಯಕ್ಕೆ ನಿಜವಾದದ್ದೇ ಅರ್ಹತೆ: ನಕಲಿ ಉತ್ಪನ್ನಗಳ ವಿರುದ್ಧ ಹರ್ಬಾಲೈಫ್ ಇಂಡಿಯಾದ ಉಪಕ್ರಮ