
ದೆಹಲಿ(ನ.15): 500 ರೂ ಮತ್ತು 1000 ರೂ ನೋಟುಗಳ ಬದಲಾವಣೆಯಲ್ಲಿ ನಡೆಯುತ್ತಿರುವ ಅಕ್ರಮವನ್ನು ತಡೆಯುವ ಸಲುವಾಗಿ ಒಂದು ಬೆರಳಿಗೆ ಶಾಯಿ ಹಚ್ಚಲು ಸೂಚನೆ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸೂಚಿಸಿದ್ದಾರೆ ಎನ್ನಲಾಗಿದೆ.
ದೆಹಲಿಯಲ್ಲಿ ಈ ಕುರಿತು ಶಶಿಕಾಂತ್ ದಾಸ್ ಹೇಳಿಕೆ ನೀಡಿದ್ದು, ಬ್ಯಾಂಕ್, ಅಂಚೆ ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, 500 ರೂ ಮತ್ತು 1000 ರೂ ನೋಟುಗಳನ್ನು ಬದಲಾವಣೆ ಮಾಡಿಕೊಂಡವರ ಕೈ ಬೆರಳಿಗೆ ಶಾಯಿ ಹಾಕಬೇಕು.
ಈ ಮೂಲಕ ಒಬ್ಬರೇ ಹಲವು ಬಾರಿ ನೋಟು ಬದಲಾವಣೆ ಮಾಡುವುದನ್ನು ತಡೆಯಲು ಈ ಕ್ರಮಕ್ಕೆ ಮುಂದಾಗಲಾಗಿದೆ ಎನ್ನಲಾಗಿದೆ.
ಒಂದು ಕಡೆ ಬ್ಯಾಂಕ್ ಮತ್ತು ಎಟಿಎಂ ಮುಂದೆ ಜನ ಸೇರಿದ್ದು, ಇಂತಹ ಸಂದರ್ಭದಲ್ಲಿ ಈ ರೀತಿಯ ನಿರ್ಧಾರ ಕೈಗೊಂಡಿರುವುದು ಬಿಸಿ ತುಪ್ಪದ ಹಾಗೇ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.