
ನವದೆಹಲಿ: ರಾಜಧಾನಿ ಎಕ್ಸ್ಪ್ರೆಸ್ ರೈಲುಗಳ ಹವಾನಿಯಂತ್ರಿತ ಬೋಗಿಗಳಲ್ಲಿ ಕಾಯ್ದಿರಿಸಿದ ಸೀಟುಗಳು ಖಚಿತವಾಗದೇ ಇದ್ದರೆ, ನಿಗದಿತ ಸ್ಥಳಕ್ಕೆ ಏರ್ ಇಂಡಿಯಾ ವಿಮಾನದ ಮೂಲಕ ಪ್ರಯಾಣಿಸುವ ಆಯ್ಕೆ ಶೀಘ್ರವೇ ಲಭ್ಯವಾಗಲಿದೆ.
ಏರ್ ಇಂಡಿಯಾ ಮಾಜಿ ಮುಖ್ಯಸ್ಥ ಅಶ್ವಿನಿ ಲೊಹಾನಿ ಕಳೆದ ವರ್ಷ ಇಂಥದ್ದೊಂದು ಪ್ರಸ್ತಾಪವನ್ನು ರೈಲ್ವೆ ಇಲಾಖೆಯ ಮುಂದಿಟ್ಟಿದ್ದರು.
ಆದರೆ, ರೈಲ್ವೆ ಇಲಾಖೆ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ, ಲೊಹಾನಿ ಅವರು ಈಗ ರೈಲ್ವೆ ಮಂಡಳಿಯ ಮುಖ್ಯಸ್ಥರಾಗಿದ್ದು, ಒಂದು ವೇಳೆ ಏರ್ ಇಂಡಿಯಾದಿಂದ ಪ್ರಸ್ತಾವನೆ ಬಂದರೆ ಅದನ್ನು ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ.
ಸೀಟು ಖಚಿತವಾಗದ ಪ್ರಯಾಣಿಕರ ಮಾಹಿತಿಯನ್ನು ಏರಿಂಡಿಯಾಕ್ಕೆ ನೀಡಲಾಗುವುದು. ಅವರು ಸೂಕ್ತ ದರಕ್ಕೆ ಪ್ರಯಾಣಿಕರಿಗೆ ಟಿಕೆಟ್ ಒದಗಿಸಬಹುದು. ಇದರಿಂದ ಏರ್ ಇಂಡಿಯಾಕ್ಕೂ
ಲಾಭವಾಗುತ್ತದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.