ಭ್ರಷ್ಟಾಚಾರದ ಕುರಿತು ವರದಿ ಮಾಡಿದರೆ 2 ವರ್ಷ ಜೈಲು!

Published : Oct 21, 2017, 04:31 PM ISTUpdated : Apr 11, 2018, 12:34 PM IST
ಭ್ರಷ್ಟಾಚಾರದ ಕುರಿತು ವರದಿ ಮಾಡಿದರೆ 2 ವರ್ಷ ಜೈಲು!

ಸಾರಾಂಶ

ರಾಜಸ್ಥಾನ ಸಿಎಂ ವಸುಂಧರಾ ರಾಜೇ ಅವರು ಭ್ರಷ್ಟ ಅಧಿಕಾರಿಗಳ ರಕ್ಷಿಸಲು ನೆರವು ನೀಡಬಲ್ಲಂಥ ಸುಗ್ರೀವಾಜ್ಞೆಯೊಂದನ್ನು ಹೊರಡಿಸಿದ್ದಾರೆ. ಬಿಜೆಪಿ ಸರ್ಕಾರದ ಈ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಜೈಪುರ(ಅ.21): ರಾಜಸ್ಥಾನ ಸಿಎಂ ವಸುಂಧರಾ ರಾಜೇ ಅವರು ಭ್ರಷ್ಟ ಅಧಿಕಾರಿಗಳ ರಕ್ಷಿಸಲು ನೆರವು ನೀಡಬಲ್ಲಂಥ ಸುಗ್ರೀವಾಜ್ಞೆಯೊಂದನ್ನು ಹೊರಡಿಸಿದ್ದಾರೆ. ಬಿಜೆಪಿ ಸರ್ಕಾರದ ಈ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ.

ರಾಜಸ್ಥಾನ ಸರ್ಕಾರ ಹೊರಡಿಸಿರುವ ನೂತನ ಸುಗ್ರೀವಾಜ್ಞೆ ಅನ್ವಯ ಯಾವುದೇ ನಿವೃತ್ತ ಅಥವಾ ಹಾಲಿ ಕಾರ್ಯನಿರ್ವಹಿಸುತ್ತಿರುವ ಜಡ್ಜ್‌ಗಳು, ಮ್ಯಾಜಿಸ್ಟ್ರೇಟ್ ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರದ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ. ಕರ್ತವ್ಯದ ಅವಧಿಯಲ್ಲಿ ಕೈಗೊಂಡ ಯಾವುದೇ ನಿರ್ಧಾರಕ್ಕೆ ಈ ನಿಯಮ ಅನ್ವಯವಾಗಲಿದೆ.

ಒಂದು ವೇಳೆ ತನಿಖೆಗೆ ಕೋರಿಕೆ ಬಂದರೆ ಆ ಬಗೆ ಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ 6 ತಿಂಗಳ ಕಾಲಾವಕಾಶ ಇರುತ್ತದೆ. ಒಂದು ವೇಳೆ ಈ ಅವಧಿಯಲ್ಲಿ ಅನುಮತಿ ನಿರಾಕರಿಸಿದರೆ ತನಿಖೆ ನಡೆಸುವಂತಿಲ್ಲ. ಯಾವುದೇ ಆರೋಪದ ಕುರಿತು ತನಿಖೆಗೆ ಆದೇಶಿಸುವವರೆಗೂ ಆ ಕುರಿತು ಮಾಧ್ಯಮಗಳು ವರದಿ ಪ್ರಕಟಿಸುವಂತಿಲ್ಲ. ಇದನ್ನು ಮೀರಿದವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿರುತ್ತದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಏಷ್ಯಾನೆಟ್ ಕನ್ನಡಪ್ರಭ ಸುವರ್ಣ ನ್ಯೂಸ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!