ಅನರ್ಹ ಶಾಸಕರಿಗೆ ಈಗ ಹೊಸ ಆತಂಕ..!

Published : Sep 25, 2019, 07:38 AM IST
ಅನರ್ಹ ಶಾಸಕರಿಗೆ ಈಗ ಹೊಸ ಆತಂಕ..!

ಸಾರಾಂಶ

ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ಸಮಸ್ಯೆಯಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ಹೇಳಿದ್ದು ಕೇಳಿ ನಿಟ್ಟುಸಿರು ಬಿಟ್ಟಿದ್ದ ಅನರ್ಹ ಶಾಸಕರಿಗೆ ಈಗ ಮತ್ತೊಂದು ಸಮಸ್ಯೆ ಎದುರಾಗಿದೆ. ಯಾರು ಬೇಕಾದರೂ ನಾಮಪತ್ರ ಸಲ್ಲಿಸಬಹುದು. ಆದರೆ, ಅದು ಅಂಗೀಕಾರವಾಗುವುದು ಮುಖ್ಯ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸ್ಪಷ್ಟಪಡಿಸಿರುವುದು ಅನರ್ಹ ಶಾಕರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ. 

ಬೆಂಗಳೂರು(ಸೆ.25): ರಾಜ್ಯದಲ್ಲಿ ಘೋಷಣೆಯಾಗಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅನರ್ಹಗೊಂಡಿರುವ ಶಾಸಕರು ಸೇರಿದಂತೆ ಯಾರು ಬೇಕಾದರೂ ನಾಮಪತ್ರ ಸಲ್ಲಿಸಬಹುದು. ಆದರೆ, ಅದು ಅಂಗೀಕಾರವಾಗುವುದು ಮುಖ್ಯವಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ಸಮಸ್ಯೆಯಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ಹೇಳಿದ್ದು ಕೇಳಿ ನಿಟ್ಟುಸಿರು ಬಿಟ್ಟಿದ್ದ ಅನರ್ಹ ಶಾಸಕರಿಗೆ ಇದೀಗ ಸಂಜೀವ್ ಕುಮಾರ್ ಹೇಳಿಕೆಯಿಂದ ಮತ್ತೆ ಆತಂಕ ಎದುರಾಗಿದೆ. ಆಯೋಗದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಜೀವ್ ಕುಮಾರ್, ಉಪ ಚುನಾವಣೆಗೆ ಅನರ್ಹಗೊಂಡಿರುವ ಶಾಸಕರು ಸ್ಪರ್ಧೆ ಮಾಡುವಂತಿಲ್ಲ ಎಂದು ನಾನು ಹೇಳಿಕೆ ನೀಡಿಲ್ಲ. ಮಾಧ್ಯಮಗಳು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿವೆ.

ಉಪಚುನಾವಣೆ ನಡುವೆ 3 ದಿನದ ಅಧಿವೇಶನ.. ಏನಿದರ ಮರ್ಮ?

ಉಪ ಚುನಾವಣೆಗೆ ಅನರ್ಹಗೊಂಡಿರುವ ಶಾಸಕರು ಸೇರಿದಂತೆ ಯಾರು ಬೇಕಾದರೂ ನಾಮಪತ್ರ ಸಲ್ಲಿಸಬಹುದು. ಆದರೆ, ಅದು ಅಂಗೀಕಾರ ವಾಗುವುದು ಮುಖ್ಯ. ಚುನಾವಣಾಧಿಕಾರಿಗಳು ನಿಯಮಾನುಸಾರವಾಗಿರುವ ನಾಮಪತ್ರಗಳನ್ನು ಮಾತ್ರ ಅಂಗೀಕರಿಸಲಿದ್ದಾರೆ. ಒಂದು ವೇಳೆ ನಿಯಮಾನುಸಾರ ಇಲ್ಲದಿದ್ದರೆ ಅಂತಹ ನಾಮಪತ್ರಗಳನ್ನು ತಿರಸ್ಕರಿಸಲಾಗುತ್ತದೆ ಎಂದು ಹೇಳಿದರು.

ಅತ್ತ ಬೈ ಎಲೆಕ್ಷನ್ ತಡೆ ಹಿಡಿಯುವಂತೆ ಮನವಿ: ಇತ್ತ ಉಪಚುನಾವಣೆ ನಡೆಸುವಂತೆ ಅನರ್ಹ ಶಾಸಕನ ಪಟ್ಟು

ಅನರ್ಹ ಶಾಸಕರ ಪ್ರಕರಣ ವಿಚಾರಣೆ ಹಂತದಲ್ಲಿದ್ದು, ಶೀಘ್ರವೇ ತೀರ್ಪು ಬರಲಿದೆ. ನಂತರ ಎಲ್ಲದಕ್ಕೂ ಸ್ಪಷ್ಟನೆ ಸಿಗಲಿದೆ. ನ್ಯಾಯಾಲಯದಲ್ಲಿ ವಿಚಾರಣೆ ಇರುವ ಕಾರಣ ಈ ಬಗ್ಗೆ ಮಾತನಾಡಿದರೆ ನ್ಯಾಯಾಂಗ ನಿಂದನೆಯಾಗಲಿದೆ. ಹೀಗಾಗಿ ಅನರ್ಹಗೊಂಡವರ ಪ್ರಕರಣದ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಬೈ ಎಲೆಕ್ಷನ್: ಮಸ್ಕಿ, RR ನಗರ ಕ್ಷೇತ್ರಗಳಿಗೆ ಚುನಾವಣೆಯಾಕಿಲ್ಲ? ಕಾರಣ ಇಲ್ಲಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ: ಬಸವರಾಜ ರಾಯರೆಡ್ಡಿ
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!