ಜನ್ ಧನ್ ಖಾತೆದಾರರಿಗೆ ಆರ್'ಬಿಐ ಹೊಸ ಸೂಚನೆ!: ಕಪ್ಪು ಹಣ ತಡೆಗೆ ಮತ್ತೊಂದು ಗದಾಪ್ರಹಾರ

Published : Nov 30, 2016, 04:58 AM ISTUpdated : Apr 11, 2018, 12:59 PM IST
ಜನ್ ಧನ್ ಖಾತೆದಾರರಿಗೆ ಆರ್'ಬಿಐ ಹೊಸ ಸೂಚನೆ!: ಕಪ್ಪು ಹಣ ತಡೆಗೆ ಮತ್ತೊಂದು ಗದಾಪ್ರಹಾರ

ಸಾರಾಂಶ

ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಜನ್ ಧನ್ ಖಾತೆಗಳಲ್ಲಿನ ವಿತ್ ಡ್ರಾ ಮಿತಿಯನ್ನು 10 ಸಾವಿರ ರು. ಕಡಿತಗೊಳಿಸಿದೆ. ನೋಟು ನಿಷೇಧದ ಬಳಿಕ ಜನ್ ಧನ್ ಖಾತೆಗಳಲ್ಲಿ ಅಪಾರ ಪ್ರಮಾಣದ ಠೇವಣಿ ಹರಿದುಬರುತ್ತಿದ್ದು, ಈ ಪೈಕಿ ಬಹುತೇಕ ಹಣ ಕಪ್ಪುಹಣ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿರುವ ಆರ್ ಬಿಐ  ಜನ್ ಧನ್ ಖಾತೆಗಳಲ್ಲಿನ ಹಣ ಹಿಂಪಡೆಯುವ ಮಿತಿಗೆ ಕಡಿವಾಣ ಹಾಕಿದ್ದು, ಈ ಖಾತೆಗಳಲ್ಲಿ ತಿಂಗಳಿಗೆ ಗರಿಷ್ಠ 10 ಸಾವಿರ ರು. ನಗದು ಹಣವನ್ನು ಮಾತ್ರ ಹಿಂಪಡೆಯಬಹುದಾಗಿದೆ.

ನವದೆಹಲಿ(ನ.30): ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಜನ್ ಧನ್ ಖಾತೆಗಳಲ್ಲಿನ ವಿತ್ ಡ್ರಾ ಮಿತಿಯನ್ನು 10 ಸಾವಿರ ರು. ಕಡಿತಗೊಳಿಸಿದೆ. ನೋಟು ನಿಷೇಧದ ಬಳಿಕ ಜನ್ ಧನ್ ಖಾತೆಗಳಲ್ಲಿ ಅಪಾರ ಪ್ರಮಾಣದ ಠೇವಣಿ ಹರಿದುಬರುತ್ತಿದ್ದು, ಈ ಪೈಕಿ ಬಹುತೇಕ ಹಣ ಕಪ್ಪುಹಣ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿರುವ ಆರ್ ಬಿಐ  ಜನ್ ಧನ್ ಖಾತೆಗಳಲ್ಲಿನ ಹಣ ಹಿಂಪಡೆಯುವ ಮಿತಿಗೆ ಕಡಿವಾಣ ಹಾಕಿದ್ದು, ಈ ಖಾತೆಗಳಲ್ಲಿ ತಿಂಗಳಿಗೆ ಗರಿಷ್ಠ 10 ಸಾವಿರ ರು. ನಗದು ಹಣವನ್ನು ಮಾತ್ರ ಹಿಂಪಡೆಯಬಹುದಾಗಿದೆ.

ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆರ್ ಬಿಐ ಕೆವೈಸಿ (ನಿಮ್ಮ ಗ್ರಾಹಕರ ತಿಳಿಯಿರಿ) ಆಗಿರುವ ಜನ್ ಧನ್ ಯೋಜನೆಯ ಖಾತೆದಾರರು ಮಾಸಿಕ ಗರಿಷ್ಢ 10 ಸಾವಿರ ರು, ಹಣ ಹಿಂಪಡೆಯಬಹುದಾಗಿದ್ದು, ಕೆವೈಸಿ  ಆಗಿರದ ಖಾತೆಗಳಲ್ಲಿ ತಿಂಗಳಿಗೆ ಗರಿಷ್ಠ 5 ಸಾವಿರ ರು.ಹಣವನ್ನು ಮಾತ್ರ ವಿತ್ ಡ್ರಾ ಮಾಡಬಹುದಾಗಿದೆ ಎಂದು ತಿಳಿಸಿದೆ.

ಪ್ರಮುಖವಾಗಿ ನೋಟು ನಿಷೇಧ ಘೋಷಣೆಯಾದ ನವೆಂಬರ್ 8 ರ.ಬಳಿಕ ಖಾತೆಗಳಿಗೆ ಜಮೆಯಾದ ಹಣಕ್ಕೆ  ಮಾತ್ರ ಈ ನಿಯಮಾವಳಿ ಅನ್ವಯವಾಗುತ್ತದೆ ಎಂದೂ ಆರ್ ಬಿಐ ಸ್ಪಷ್ಟಪಡಿಸಿದೆ. ಜನ್ ಧನ್ ಖಾತೆಯನ್ನು ಹೊಂದಿರುವ ರೈತರು, ಬಡವರು ಮತ್ತು ಸಣ್ಣ ಪ್ರಮಾಣದ ವ್ಯಾಪಾರಸ್ಥರು ಕಾಳಧಿನಕರ ಕಮಿಷನ್ ದಂಧೆಗೆ ಬಲಿಯಾಗದಂತೆ ತಡೆಯಲು ಆರ್ ಬಿಐ ಈ ಮಹತ್ವದ ಕ್ರಮ ಕೈಗೊಂಡಿದೆ ಎಂದು  ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈ ಹೌಸಿಂಗ್ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ದುರಂತ, ನಿರ್ದೇಶಕ ಸಂದೀಪ್ ಸಿಂಗ್ ಸೇರಿ 40 ಮಂದಿ ರಕ್ಷಣೆ
ಹೊಸ ವರ್ಷಕ್ಕೆ ಎಲೆಕ್ಟ್ರಾನಿಕ್ ಸಿಟಿ ಹೈ ಅಲರ್ಟ್; ಮಹಿಳೆಯರ ಸುರಕ್ಷತೆಗೆ 'ರಾಣಿ ಚೆನ್ನಮ್ಮ ಪಡೆ ಸಜ್ಜು, ಪಬ್-ಬಾರ್‌ಗಳಿಗೆ ಪೊಲೀಸರ ಬಿಗಿ ರೂಲ್ಸ್!