
ನವದೆಹಲಿ: ಹೆದ್ದಾರಿಗಳಲ್ಲಿ ಇನ್ನು ಟೋಲ್ ರಸ್ತೆಗೆ ನಿಗದಿಯಾದ ಹಣ ನೀಡಬೇಕಾಗಿಲ್ಲ. ಬದಲಾಗಿ ಸಂಚರಿಸಿದ ದೂರಕ್ಕೆ ಅನುಗುಣವಾಗಿ ಟೋಲ್ ಸಂಗ್ರಹಿಸಲಾಗುತ್ತದೆ. ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಿಸಿದ ಬಜೆಟ್ ನಲ್ಲಿ, ‘ಬಳಸಿದ್ದಕ್ಕಷ್ಟೇ ಟೋಲ್’ ಎಂಬ ಹೊಸ ನೀತಿಯೊಂದನ್ನು ಜಾರಿಗೆ ತರುತ್ತಿರುವುದಾಗಿ ತಿಳಿಸಿದ್ದಾರೆ.
ಈಗಿರುವ ಮುಕ್ತ ಟೋಲ್ ವ್ಯವಸ್ಥೆ ಯಲ್ಲಿ ವಾಹನ ಸವಾರರು ಟೋಲ್ ರಸ್ತೆಯನ್ನು ಬಳಸಿದ ಮಾತ್ರಕ್ಕೆ ನಿಗದಿ ಪಡಿಸಿದ ಹಣ ಪಾವತಿ ಸಬೇಕಿತ್ತು.
ಹರ್ಯಾಣ ಮತ್ತು ಉತ್ತರ ಪ್ರದೇಶದ ಪಶ್ಚಿಮ ಹೊರ ಹೆದ್ದಾರಿಯಲ್ಲಿ ಪ್ರಾಯೋಗಿಕವಾಗಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.