
ಚಿಕ್ಕಮಗಳೂರು (ಜ.21): ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳು ಸ್ಟೇಷನ್'ನಿಂದಲೇ ಎಸ್ಕೇಪ್ ಆಗಿದ್ದಾರೆ. ಇದರಲ್ಲಿ ಮಗಳು ರುಕ್ಸನಾಳನ್ನೇ ಬಳಸಿಕೊಂಡು ಹನಿಟ್ರ್ಯಾಪ್ ಕೃತ್ಯಕ್ಕೆ ತಾಯಿ ಕೈರಯನ್ನಿಸ್ಸಾ ಮುಂದಾಗಿದ್ದಳು ಎಂಬ ಮಾಹಿತಿ ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದ ಒಟ್ಟು 6 ಮಂದಿಯನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ ಮೂವರು ಪ್ರಮುಖ ಆರೋಪಿಗಳು ಜನವರಿ 17ರಂದು ಎನ್.ಆರ್.ಪುರ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿದ್ದಾರೆ.
FIR ದಾಖಲಿಸುವ ಮುನ್ನವೇ ಪರಾರಿಯಾದ ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಿ ಕರೆತರಲು ಎಸ್.ಪಿ ಅಣ್ಣಾಮಲೈ ಸೂಚನೆ ನೀಡಿದ್ದಾರೆ.
ಜನವರಿ 17ರಂದು ಈ ಆರೋಪಿಗಳು ಪರಾರಿಯಾದರೂ ಎನ್.ಆರ್.ಪುರ ಠಾಣೆ ಪೊಲೀಸರು ಮಾಹಿತಿಯೇ ಕೊಟ್ಟಿಲ್ಲ. ಹೀಗಾಗಿ ಆರೋಪಿಗಳ ಪರಾರಿಗೆ ಪೊಲೀಸರೇ ಸಹಕರಿಸಿರುವ ಅನುಮಾನ ವ್ಯಕ್ತವಾಗಿತ್ತು.
ಕೊನೆಗೂ ಹನಿಟ್ರ್ಯಾಪ್ ತಂಡದ ತಂತ್ರಗಾರಿಕೆ ಬಯಲು ಮಾಡಿದ ಎಸ್.ಪಿ ಅಣ್ಣಾಮಲೈ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.