ಜಿಯಾಖಾನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

Published : Sep 20, 2016, 07:39 AM ISTUpdated : Apr 11, 2018, 12:50 PM IST
ಜಿಯಾಖಾನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

ಸಾರಾಂಶ

`ಜಿಯಾಖಾನ್ ಅವರದ್ದು ಆತ್ಮಹತ್ಯೆಯಲ್ಲ, ನೇಣು ಹಾಕಲಾಗಿದೆ'

ಮುಂಬೈ(ಸೆ.20): 2013ರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ನಟಿ ಜಿಯಾಖಾನ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಜಿಯಾ ಸಾವಿಗೀಡಾಗಿ 3 ವರ್ಷದ ಬಳಿಕ ಪ್ರಕರಣಕ್ಕೆ ಜೀವ ಬಂದಿದೆ. ಮೊದ ಮೊದಲು ಬಾಯ್`ಫ್ರೆಂಡ್ ಸೂರಜ್ ಪಂಚೋಲಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ ಕೇಳಿಬಂದಿತ್ತು. ಬಳಿಕ ಸಿಬಿಐ ಜಿಯಾಖಾನ್ ಸಾವು ಆತ್ಮಹತ್ಯೆಯಿಂದ ಸಂಬಂಧಿಸಿದೆ ಎಂದು ವರದಿ ನೀಡಿತ್ತು. ಇದೀಗ, ಜಿಯಾ ತಾಯಿ ರಾಬಿಯಾ ನೇಮಿಸಿದ್ದ  ವಿದೇಶಿ ವಿಧಿ ವಿಜ್ಞಾನ ತಜ್ಞನೊಬ್ಬ ಜಿಯಾಖಾನ್ ಅವರದ್ದು ಆತ್ಮಹತ್ಯೆಯಲ್ಲ, ನೇಣು ಹಾಕಲಾಗಿದೆ ಎಂದು ಹೇಳಿದ್ದಾನೆ.

ಮುಂಬೈ ಮಿರರ್ ಮಾಡಿರುವ ವರದಿಯ ಪ್ರಕಾರ, ಜಿಯಾಖಾನ್ ಸಾವಿನ ಕುರಿತಂತೆ ಸಿಬಿಐ ನಿಡಿದ್ದ ವರದಿ ಬಗ್ಗೆ ಅಸಮಾಧಾನಗೊಂಡಿದ್ದ ತಾಯಿ ರಾಬಿಯಾ, ಜೇಸನ್ ಪೇಯ್ನ್ ಜೇಮ್ಸ್ ಎಂಬ ಬ್ರಿಟಿಷ್ ಪೊರೆನ್ಸಿಕ್ ಎಕ್ಸ್`ಪರ್ಟ್ ಮೊರೆಹೋಗಿದ್ದರು. ಈ ವರದಿಯನ್ನ ರಾಬಿಯಾ ನಾಳೆ ಮುಂಬೈ ಸೆಷನ್ಸ್ ಕೋರ್ಟ್ ಮುಮದಿಡಲಿದ್ದು, ನ್ಯಾಯಾಲಯದಲ್ಲಿ ನಿರ್ಧಾರ ಏನಿರುತ್ತೆ ಎಂಬುದು ಕುತೂಹಲ ಕೆರಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್