
ಬೆಂಗಳೂರು(ಜ.31): ನಿರೀಕ್ಷೆಯಂತೆ ರನ್'ಗಳಿಸಿಲ್ಲ ಎಂಬ ಕಾರಣಕ್ಕೆ ಬಾಲಕನ ಮೇಲೆ ಕೋಚ್ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಅಕಾಡಮಿಗೆ ಕೆಟ್ಟ ಹೆಸರು ತರಲು ಈ ರೀತಿ ಸುಳ್ಳುಸುದ್ದಿ ಹಬ್ಬಿಸಲಾಗಿದೆ ಎಂದು ಬಸವನಗುಡಿ ಕ್ರಿಕೆಟ್ ಅಕಾಡೆಮಿಯ ಬಿ.ಕೆ. ರವಿ ತಿಳಿಸಿದ್ದಾರೆ.
ಖಾಸಗಿ ಟಿ 20 ಪಂದ್ಯಾವಳಿಯಲ್ಲಿ ನಿಗದಿತ ರನ್ ಗಳಿಸದ್ದಕ್ಕೆ, ಕೋಚ್ ರಮಣ ಬಾಲಕನ ಎದೆ ಹಾಗೂ ಹೊಟ್ಟೆ ಭಾಗಕ್ಕೆ ತೀವ್ರತರನಾದ ಹಲ್ಲೆ ನಡೆಸಿದ್ದಾರೆ ಎಂದು ಬಾಲಕನ ಪೋಷಕರು ದೂರಿದ್ದರು. ಈ ಕುರಿತಂತೆ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಕೂಡಾ ದಾಖಲಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಸವನಗುಡಿ ಕ್ರಿಕೆಟ್ ಅಕಾಡೆಮಿಯ ರವಿ, ಬಾಲಕನ ಪೋಷಕರು ತಮ್ಮ ಮಗನನ್ನು KSCA ವಲಯ ಮಟ್ಟದ ಟೂರ್ನಿಗಳಿಗೆ ಆಯ್ಕೆ ಮಾಡುವಂತೆ ನನಗೆ ಮೆಸೇಜ್ ಮಾಡಿದ್ದರು. ಮೊದಲನೆಯದಾಗಿ ನಾನು KSCA ಮ್ಯಾನೇಜಿಂಗ್ ಕಮಿಟಿಯಲ್ಲಿಲ್ಲ. ನಾನು ಸರ್ಕಾರಿ ನೌಕರ ಹಾಗೂ ಅಂಪೈರ್ ಆಗಿ ಕೂಡಾ ಕಾರ್ಯ ನಿರ್ವಹಿಸುತ್ತೇನೆ.
ಆದಿತ್ಯನ ತಂದೆ ಸಂಗಮ್ ತಮ್ಮ ಮಗನಿಗೆ ಅವಕಾಶ ನೀಡಿ ಎಂದು ಬೇಡಿಕೆಯಿಟ್ಟಿದ್ದರು. ಆದರೆ ನಾನು ಒಪ್ಪಿರಲಿಲ್ಲ. ಹೀಗಾಗಿ ಅಕಾಡೆಮಿ ಮೇಲೆ ಕೆಟ್ಟ ಹೆಸರು ತರಲು ಸಂಚು ನಡೆಸಿದ್ದಾರೆಂದು ರವಿ ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.