
ವಾಸ್ಕೊ(ಜ.01): ಹೊಸ ವರ್ಷದ ಸಂಭ್ರಮಾಚರಣೆಗೆ ಬಹುತೇಕರ ಸ್ಫಾಟ್ ಗೋವಾ. ಪ್ರವಾಸಿಗರನ್ನ ಕೈಬೀಸಿ ಕರೆಯುವ ಗೋವಾ ಬೀಚ್ಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ತುಸು ಹೆಚ್ಚೆ ಇರುತ್ತೆ. ಹೀಗೆ ಗೋವಾದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ಗೆ ತೆರಳಿದ ಬೆಂಗಳೂರಿನ ಪ್ರವಾಸಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಬಾಲಿವುಡ್ ನಟಿ ಕಾರು ಗುದ್ದಿ ಬೈಕ್ ಸವಾರ ಸಾವು
ಬೆಂಗಳೂರಿನ ರವಿಕುಮಾರ ಧನಂಜಯ ಪೂಜಾರಿ(29) ಸಾವನ್ನಪ್ಪಿದ ದುರ್ದೈವಿ. ನಾಲ್ವರು ಮಿತ್ರರೊಂದಿಗೆ ಹೊಸ ವರ್ಷ ಸಂಭ್ರಮಾಚರಣೆಗಾಗಿ ಗೋವಾದ ವಾಸ್ಕೊಕ್ಕೆ ತೆರಳಿದ್ದರು. ಬೋಗಮಾಳೊ ಬೀಚ್ನಲ್ಲಿ ಈಜಲು ಹೋದ ರವಿಕುಮಾರ ಅಲೆಗೆ ಕೊಚ್ಚಿ ಹೋಗಿದ್ದಾರೆ. ತಕ್ಷಣವೇ ಸ್ಥಳೀಯರ ಸಹಾಯದಿಂದ ರವಿಕುಮಾರ ಅವರನ್ನ ರಕ್ಷಿಸಲಾಯಿತು.
ಇದನ್ನೂ ಓದಿ: 10 ಲಕ್ಷ ಮೌಲ್ಯದ ರಾಜ್ಯದ ಮೀನು ಗೋವಾದಲ್ಲಿ ಕಸ!
ಅಲೆಯ ರಭಸ ಹಾಗೂ ನೀರಿನಿಂದ ತೀವ್ರ ಅಸ್ವಸ್ಥನಾಗಿದ್ದ ರವಿಕುಮಾರನನ್ನ ತಕ್ಷಣವೇ ಸ್ಥಳೀಯ ಚಿಕಲಿಂ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ರವಿಕುಮಾರ ಕೊನೆಯುಸಿರೆಳಿದ್ದಾರೆ. ವಾಸ್ಕೊ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.