ಇನ್ನೂ ಎರಡು ದಿನ ಸುರಿಯಲಿದೆ ರಾಜ್ಯದಲ್ಲಿ ಮಳೆ

Published : Apr 18, 2019, 09:43 AM IST
ಇನ್ನೂ ಎರಡು ದಿನ ಸುರಿಯಲಿದೆ ರಾಜ್ಯದಲ್ಲಿ ಮಳೆ

ಸಾರಾಂಶ

ಲೋಕಸಭಾ ಚುನಾವಣಾ ಕಾವಿನ ಬೆನ್ನಲ್ಲೇ ರಾಜ್ಯದಲ್ಲಿ ಮಳೆ ಸುರಿದು ಭುವಿಯನ್ನು ತಂಪಾಗಿಸಿದೆ. ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

 ಬೆಂಗಳೂರು :  ತೀವ್ರ ಬಿಸಿಲಿನಿಂದ ಬಳಲಿದ ನಾಡಿಗೆ ವರುಣನ ಸಿಂಚನವಾಗಿದೆ. ರಾಜ್ಯದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆ ಸುರಿದು ತಂಪಾಗಿದೆ. 

ಕಾವಿನಿಂದ ಕುದಿಯುತ್ತಿದ್ದ ಉದ್ಯಾನನಗರಿಯಲ್ಲಿಯೂ ಕೂಡ ಬುಧವಾರ ಮೊದಲ ಮಳೆಯ ಸಿಂಚನವಾಗಿದ್ದು, ಏಕಾಏಕಿ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. 

ಗುಡುಗು- ಮಿಂಚು ಸಹಿತ 73 ಮಿ.ಮೀ.ವರೆಗೆ ಸುರಿದ ಭಾರಿ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಗಾಳಿ-ಮಳೆಗೆ ನಗರದ ವಿವಿಧೆಡೆ ಹತ್ತಾರು ಮರಗಳು ಧರೆಗುರುಳಿವೆ. 

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡು ಹಾಗೂ ರಾಜ್ಯದ ಹಲವು ಪ್ರದೇಶದಲ್ಲಿ ಮಳೆಯಾಗಿದೆ. ಈ ಮಳೆಯು ಗುರುವಾರ ಮತ್ತು ಶುಕ್ರವಾರವೂ ಮುಂದುವರೆಯುವ ಮುನ್ಸೂಚನೆ ಇದೆ. ಹೀಗಾಗಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆ ನಿರೀಕ್ಷಿಸಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ