ದೇವೇಗೌಡರ ನಂತರ ಜೆಡಿಎಸ್ ಪಕ್ಷ ಉಳಿಯಲ್ಲ : 2019ಕ್ಕೆ ರಾಹುಲ್ ಪ್ರಧಾನಿ

Published : Oct 15, 2017, 03:32 PM ISTUpdated : Apr 11, 2018, 01:11 PM IST
ದೇವೇಗೌಡರ ನಂತರ ಜೆಡಿಎಸ್ ಪಕ್ಷ ಉಳಿಯಲ್ಲ : 2019ಕ್ಕೆ ರಾಹುಲ್ ಪ್ರಧಾನಿ

ಸಾರಾಂಶ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ. ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಯಾರನ್ನು ಬೇಕಾದರು ನಿಲ್ಲಿಸಲಿ. ಅದಕ್ಕೆ ನಾನು ಭಯಪಡುವುದಿಲ್ಲ.

ಕೋಲಾರ(ಅ.15): ಮಾಜಿ ಪ್ರಧಾನಿ ದೇವೇಗೌಡರ ನಂತರ ಜೆಡಿಎಸ್ ಪಕ್ಷ ಉಳಿಯಲ್ಲ. ಪಕ್ಷದಲ್ಲಿ ರೇವಣ್ಣ ಮತ್ತು ಅವರ ಕುಟುಂಬಕ್ಕೆ ಸರಿಯಾದ ಸ್ಥಾನಮಾನ ಇಲ್ಲ.ಆತಂಕದಲ್ಲಿ ರೇವಣ್ಣ ಮತ್ತು ಕುಟುಂಬಸ್ಥರು ಇದ್ದಾರೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಟಿಪ್ಪು ಜಯಂತಿ ಆಚರಣೆ ಪ್ರಯುಕ್ತ ಕೋಲಾರಕ್ಕೆ ಆಗಮಿಸಿರುವ ಅವರು ಸುದ್ದಿಗಾರರರೊಂದಿಗೆ ಮಾತನಾಡಿದರು, ಎಚ್.ಡಿ. ರೇವಣ್ಣ ಕುಮಾರಸ್ವಾಮಿಯನ್ನ ಟಾರ್ಗೆಟ್ ಮಾಡ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ.

ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಯಾರನ್ನು ಬೇಕಾದರು ನಿಲ್ಲಿಸಲಿ. ಅದಕ್ಕೆ ನಾನು ಭಯಪಡುವುದಿಲ್ಲ. ಮುಂದೆ ಕಾಂಗ್ರೆಸ್ ಉಪಾಧ್ಯಕ್ಷ ರಾಹಲ್​ಗಾಂಧಿ ಪ್ರಧಾನಿ ಆಗ್ತಾರೆ. 2019ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಆಯ್ಕೆ ಖಚಿತ' ಎಂದು ಹೇಳಿದರು.

ಕಾಂಗ್ರೆಸ್​​ನಲ್ಲಿ ಜೆಡಿಎಸ್ ವಿಲೀನವಾಗುತ್ತೆ

ದೇವೇಗೌಡರು ಜೀವಂತವಾಗಿರುವವರೆಗೂ ಜೆಡಿಎಸ್ ಇರುತ್ತೆ. ನಂತರ ಅದು ಕಾಂಗ್ರೆಸ್ಸಿಗೆ ವಿಲೀನವಾಗುತ್ತದೆ. ಎಚ್​.ಡಿ.ರೇವಣ್ಣ ಮುಂದಿನ ದಿನಗಳಲ್ಲಿ ಕಾಂಗ್ರೆಸ್​ಗೆ ಸೇರಲಿದ್ದಾರೆ. ನನ್ನ ಮುಖಾಂತರ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ' ಎಂದು ತಿಳಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಳಿ ಕಟ್ಟುವ ಶುಭ ವೇಳೆ..., 'ಇವನು ನನ್ನ ಗಂಡ' ಎಂದವಳೊಂದಿಗೆ ಸಂಸಾರ ನಡೆಸುತ್ತೇನೆ ಎಂದ ಮದುಮಗ!
ಬೆಂಗಳೂರು ಜನತೆಗೆ ಶೀಘ್ರವೇ ದೊಡ್ಡ ಮುಕ್ತಿ, ನಗರದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಮುಂದಿನ ತಿಂಗಳೊಳಗೆ ಸಂಚಾರ ಮುಕ್ತ!