ಕಾವೇರಿ ವಿಚಾರದಲ್ಲಿ ಈಗ ಕರ್ನಾಟಕಕ್ಕಿರುವ ಮುಂದಿನ ದಾರಿಗಳೇನು?

Published : Sep 21, 2016, 04:40 AM ISTUpdated : Apr 11, 2018, 01:12 PM IST
ಕಾವೇರಿ ವಿಚಾರದಲ್ಲಿ ಈಗ ಕರ್ನಾಟಕಕ್ಕಿರುವ ಮುಂದಿನ ದಾರಿಗಳೇನು?

ಸಾರಾಂಶ

ಬೆಂಗಳೂರು(ಸೆ. 21): ಸುಪ್ರೀಂಕೋರ್ಟ್'​​​​​​​​​​​​​​​​​​​​​​​​​​​​​​​​​​​​ನಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿದೆ. ಕುಡಿಯೋದಕ್ಕೆ ನೀರಿಲ್ಲವೆಂದರೂ ತಮಿಳುನಾಡಿಗೆ ನೀರು ಹರಿಸಿ ಎಂದು ಸುಪ್ರೀಂಕೋರ್ಟ್​ ಆದೇಶಿಸಿದೆ. ಹೀಗಾಗಿ ರಾಜ್ಯ ಸರ್ಕಾರ ಆದೇಶ ಪಾಲನೆ ಮಾಡಬೇಕೋ ಬೇಡವೋ ಅನ್ನೋ ಗೊಂದಲಕ್ಕೆ ಬಿದ್ದಿದೆ. ರಾಜ್ಯ ಸರ್ಕಾರದ ಮುಂದೆ ಇನ್ನೂ ಕೆಲವು ಮಾರ್ಗಗಳಿವೆ.

ರಾಜ್ಯ ಸರ್ಕಾರ ಮುಂದೇನು ಮಾಡಬಹುದು?

1) ಮರು ಪರಿಶೀಲನಾ ಅರ್ಜಿ: ತಾಂತ್ರಿಕವಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಬಹುದು. ಆದ್ರೆ ಅದೇ ಪೀಠದ ಎದುರು ಅರ್ಜಿ ವಿಚಾರಣೆಗೆ ಬರುತ್ತದೆ. ಹೀಗಾಗಿ, ಅರ್ಜಿ ಪುರಸ್ಕರಿಸುವ ಸಾಧ್ಯತೆಗಳು ಭಾರೀ ಕಡಿಮೆ. ಏಕೆಂದರೆ ಸೆ.12ರಂದು ಮರು  ಪರಿಶೀಲನಾ ಅರ್ಜಿ ಸಲ್ಲಿಸಿ ರಾಜ್ಯ ಸರ್ಕಾರ ಈಗಾಗಲೇ ಮುಖಭಂಗ ಅನುಭವಿಸಿದೆ.

2) ಮಂಡಳಿ ವಿರುದ್ಧ ಮಾತ್ರ ಮೇಲ್ಮನವಿ: ಸದ್ಯ ಸುಪ್ರೀಂಕೋರ್ಟ್ ಆದೇಶದಂತೆ ಕೆ.ಆರ್​.ಎಸ್​.ನಿಂದ ತಮಿಳುನಾಡಿಗೆ ಸೆ.27ರವರೆಗೆ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್​ ನೀರು ಹರಿಸಬೇಕು. ಆದ್ರೆ ನೀರು ಹರಿಸುವ ಬಗ್ಗೆ ಮೇಲ್ಮನವಿ ಸಲ್ಲಿಸಲು ಆಗಲ್ಲ. ಕಾವೇರಿ ನಿರ್ವಹಣಾ ಮಂಡಳಿ ರಚನೆ ಬಗ್ಗೆ ಬೇಕಾದ್ರೆ ಪ್ರಶ್ನೆ ಮಾಡಬಹುದು.

3) ಎಲ್ಲಾ ಸಂಸದರ ರಾಜೀನಾಮೆ: ಸರ್ಕಾರದ ಮುಂದಿರುವ ಆಯ್ಕೆಗಳನ್ನ ನೋಡೋದಾದ್ರೆ ಎಲ್ಲಾ ಸಂಸದರ ರಾಜೀನಾಮೆ ಕೊಡಿಸುವುದು ಮತ್ತು ಕೇಂದ್ರದ ಮೇಲೆ ಒತ್ತಡ ಹೇರಲು ಪ್ರತಿಪಕ್ಷಗಳ ಸಹಕಾರ ಕೋರಿ ಒಗ್ಗಟ್ಟು ಪ್ರದರ್ಶಿಸುವುದು ಸರ್ಕಾರದ ಮುಂದಿರುವ ಆಯ್ಕೆ. ಜೊತೆಗೆ ತಕ್ಷಣ ಅಸೆಂಬ್ಲಿ ಕರೆದು ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ನಿರ್ಣಯ ಕೈಗೊಳ್ಳುವುದು ಮತ್ತೊಂದು ಆಪ್ಷನ್​ ಆದ್ರೆ ಆದೇಶ ಪಾಲನೆ ಕಷ್ಟ ಎಂದು ಸಾಮೂಹಿಕ ರಾಜೀನಾಮೆ ಸಲ್ಲಿಸಿ ರೈತರ ಪರವಾಗಿ ನಿಲುವುದು ಸರ್ಕಾರದ  ಮುಂದಿರುವ ಆಯ್ಕೆಗಳಾಗಿವೆ..

ಸುಪ್ರೀಂ ಕೋರ್ಟ್'​ನ ಆದೇಶದ ಹಿನ್ನೆಲೆಯಲ್ಲಿ ಚರ್ಚಿಸಲು ಸಿಎಂ ಇಂದು ನಡೆಯುವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾಣ ಕೈಗೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಸಂಜೆ ಪ್ರತಿಪಕ್ಷಗಳ ನಾಯಕರು ಮತ್ತು ಸಂಸದರ ಸಭೆ ಕರೆದಿದ್ದಾರೆ. ಇಂದು ನಡೆಯುವ ಸಂಪುಟ ಸಭೆಯಲ್ಲಿ ಕಾನೂನು ಹೋರಾಟದ ಜೊತೆಗೆ ರಾಜಕೀಯ ನಡೆ ಹೇಗಿರಬೇಕು ಎಂಬ ಕುರಿತಂತೆ ಪ್ರಮುಖವಾಗಿ ಚರ್ಚೆಗೆ ಬರುವ ಸಾಧ್ಯತೆ ಇದೆ.

ಕಳೆದ ಬಾರಿ ನಡೆದ ಸಂಪುಟ ಸಭೆಯಲ್ಲಿ ಕೋರ್ಟ್​ ಆದೇಶ ಪಾಲಿಸಲು ನಿರ್ಧರಿಸಲಾಗಿತ್ತು. ಆದ್ರೆ ಸರ್ಕಾರ ಈಗ ಏನು ಮಾಡುತ್ತೆ ಅನ್ನೋದೇ ಕುತೂಹಲ. ಈಗಾಗಲೇ ಕೋರ್ಟ್​ ಆದೇಶದಂತೆ ನೀರು ಹರಿಸಿ ಕೆಆರ್​ಎಸ್​ ಜಲಾಶಯದಲ್ಲಿ ನೀರು ಬರಿದಾಗಿದೆ. ಸರ್ಕಾರಕ್ಕೆ ಈ ಭಾರೀ ಧರ್ಮ ಸಂಕಟ ಎದುರಾಗಿದೆ. ರಾಜ್ಯ ಸರ್ಕಾರದ ಮುಂದೆ ಹಲವು ಮಾರ್ಗಗಳಿವೆ. ಆದ್ರೆ ಸರ್ಕಾರ ಯಾವ ನಡೆ ಇಡಲಿದೆ ಅನ್ನೋದು ಕುತೂಹಲ ಕೆರಳಿಸಿದೆ.

- ಬ್ಯೂರೋ ರಿಪೋರ್ಟ್, ಸುವರ್ಣನ್ಯೂಸ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

44 ಸೆಕೆಂಡ್‌ನಲ್ಲಿ 72 ರಾಕೆಟ್‌ ಲಾಂಚ್‌ ಮಾಡುವ ಘಾತಕ ರಾಕೆಟ್‌ ಸಿಸ್ಟಮ್‌ಅನ್ನು ಪ್ರಮುಖ ದೇಶಕ್ಕೆ ಮಾರಿದ ಭಾರತ!
ಬಿಗ್‌ ಬಾಸ್ ವಿಜೇತ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ: ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾದ ಕಾವೇರಿ!