ಕಾವೇರಿ ಬಿಕ್ಕಟ್ಟು: ರಾಜ್ಯ ಸರಕಾರದ ಮುಂದಿನ ನಡೆಗಳೇನು?

Published : Sep 28, 2016, 03:30 AM ISTUpdated : Apr 11, 2018, 12:45 PM IST
ಕಾವೇರಿ ಬಿಕ್ಕಟ್ಟು: ರಾಜ್ಯ ಸರಕಾರದ ಮುಂದಿನ ನಡೆಗಳೇನು?

ಸಾರಾಂಶ

ಬೆಂಗಳೂರು(ಸೆ. 28): ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವುದು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಯಾಕಂದ್ರೆ ನಿನ್ನೆ ನಡೆದ ವಿಚಾರಣೆಯಲ್ಲಿ ರಾಜ್ಯದ ವಿಧಾನಮಂಡಲದ ನಿರ್ಣಯ ಏನೇ ಆಗಿರಲಿ. ಮೊದ್ಲು ತಮಿಳುನಾಡಿಗೆ ನೀರು ಬಿಡಿ ಅಂತಾ ಸುಪ್ರೀಂಕೋರ್ಟ್ ಖಡಕ್ ಆಗಿ ಆದೇಶಿಸಿದೆ. ಹೀಗಾಗಿ ರಾಜ್ಯದ ಸರ್ಕಾರದ ನಡೆ ಕುತೂಹಲ ಕೆರಳಿಸಿದೆ. .

ಸುಪ್ರೀಂಕೋರ್ಟ್ ಆದೇಶ ಪಾಲಿಸದೇ ಹೋದ್ರೆ ಮುಂದೆ ಎದುರಿಸಬೇಕಾದ ಕಾನೂನಿನ ಸಂಕೋಲೆಯ ಭಯ ಸರ್ಕಾರಕ್ಕೆ ಕಾಡುತ್ತಿದೆ. ಮತ್ತೊಂದು ಕಡೆ ತಮಿಳುನಾಡಿಗೆ ನೀರು ಬಿಟ್ಟರೆ ಸದನ ಸರ್ವಾನುಮತದಿಂದ ಅಂಗೀಕರಿಸಿದ ನಿರ್ಣಯ ಉಲ್ಲಂಘಿಸಿದ ಆಪಾದನೆಗೆ ತುತ್ತಾಗಲಿದೆ. ಇದ್ರಿಂದ ಇಕ್ಕಟ್ಟಿಗೆ ಸಿಲುಕಿರುವ ಸಿದ್ರಾಮಯ್ಯ ಇವತ್ತು ಸರ್ವಪಕ್ಷ ಸಭೆ ಕರೆದಿದ್ದಾರೆ.

ಇಂದು ಮತ್ತೊಮ್ಮೆ ಸರ್ವಪಕ್ಷ ಸಭೆ
- ಇಂದು ಬೆಳಗ್ಗೆ 9.30ಕ್ಕೆ ಸರ್ವಪಕ್ಷ ಸಭೆ
- ಸದನ ಸದಸ್ಯರ ಅಭಿಪ್ರಾಯ ಸಂಗ್ರಹ
- ಮಧ್ಯಾಹ್ನ 3 ಗಂಟೆಗೆ ಸಚಿವ ಸಂಪುಟ ಸಭೆ
- ಸರ್ಕಾರದ ಮುಂದಿನ ನಡೆ ಕುರಿತು ಸಮಾಲೋಚನೆ
- ರಾಜ್ಯದ ಪರ ವಕೀಲರಿಂದ ಸಿಎಂ ಮಾಹಿತಿ ಸಂಗ್ರಹ
- ನಂತರ ಸರ್ಕಾರದ ನಿರ್ಧಾರ ಅಧಿಕೃತ ಘೋಷಣೆ ಸಾಧ್ಯತೆ

ಇಂದು ಬುಧವಾರ ಬೆಳಗ್ಗೆ 9:30ಕ್ಕೆ ಸರ್ವಪಕ್ಷ ಸಭೆ  ನಡೆಯಲಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸದನ ಸದಸ್ಯರ ಅಭಿಪ್ರಾಯ ಪಡೆಯಲಿದ್ದಾರೆ.. ಕಳೆದ ಬಾರಿ ಸಭೆ ಉಲ್ಲಂಘಿಸಿದ್ದ ಬಿಜೆಪಿ ನಾಯಕರೂ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಪ್ರಮುಖವಾಗಿ ಸುಪ್ರೀಕೋರ್ಟ್​ನ ತೀರ್ಪಿನ ಹಿನ್ನಲೆಯಲ್ಲಿ ಸರ್ಕಾರದ ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಯಲಿದೆ. ಇದೇ ವೇಳೆ ಅಡ್ವೋಕೇಟ್​ ಜನರಲ್​ ಮಧುಸೂಧನ್​ ನಾಯ್ಕ್​ ಹಾಗೂ  ಸುಪ್ರೀಂಕೋರ್ಟ್​ನ ರಾಜ್ಯದ ಪರ ವಕೀಲರಿಂದ ಮಾಹಿತಿ ಸಂಗ್ರಹಿಸಲಿರುವ ಸಿಎಂ ಸಿದ್ರಾಮಯ್ಯ, ನಂತರವೇ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ.

ಒಟ್ಟಿನಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲಿಸುತ್ತಾರಾ ಅಥವಾ ಸದನದಲ್ಲಿ ತೆಗೆದುಕೊಂಡ ನಿರ್ಣಯಕ್ಕೆ ಸಿಎಂ ಸಿದ್ರಾಮಯ್ಯ ಬದ್ಧರಾಗಿರ್ತಾರಾ ಎಂಬುದನ್ನ ಕಾದು ನೋಡಬೇಕಾಗಿದೆ.

ಬ್ಯೂರೋ ರಿಪೋರ್ಟ್, ಸುವರ್ಣ ನ್ಯೂಸ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜ.29ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ನಟ ಪ್ರಕಾಶ್‌ ರಾಜ್‌ ರಾಯಭಾರಿ
ಪಂದ್ಯಾವಳಿಗೆ ಚಿನ್ನಸ್ವಾಮಿ ಸ್ಟೇಡಿಯಂ ಪೂರಕವಾಗಿಲ್ಲ: ಸರ್ಕಾರದ ಸಮಿತಿ ಶಿಫಾರಸು