ಮುಂದೆಯೂ ನಾನೇ ಸಿಎಂ !

Published : Mar 02, 2018, 09:33 PM ISTUpdated : Apr 11, 2018, 01:02 PM IST
ಮುಂದೆಯೂ ನಾನೇ ಸಿಎಂ !

ಸಾರಾಂಶ

’ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಉಪ್ಪಾರ ಅಭಿವೃದ್ಧಿ ನಿಗಮ ,ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದೇವೆ. ಚುನಾವಣೆಯಲ್ಲಿ ನಮಗೆ ಅಶೀರ್ವಾದ ಮಾಡಿದ್ರೆ ಮತ್ತಷ್ಟು ಅಭಿವೃದ್ಧಿ ಮಾಡ್ತೀನಿ

ಬೆಂಗಳೂರು(ಮಾ.02): ಮುಖ್ಯಮಂತ್ರಿಯಾಗಲು ನೀವು ಆಶೀರ್ವಾದ ಮಾಡಬೇಕು'. ನಿಮ್ಮ ಆಶೀರ್ವಾದಿಂದ ಐದು ವರ್ಷ ಸಿಎಂ ಆಗಿದ್ದೇನೆ.‘ಮುಂದೆಯೂ ನಿಮ್ಮ ಆಶೀರ್ವಾದ ಬೇಕು ನನಗೆ' ಎಂದು ಮುಂದಿನ ಬಾರಿಯು ನಾನೇ ಸಿಎಂ ಆಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷವಾಗಿ ತಿಳಿಸಿದ್ದಾರೆ.

ಉಪ್ಪಾರ ಸಮುದಾಯದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ‘ಮುಂದೆಯೂ ಕಾಂಗ್ರೆಸ್​ ಪಕ್ಷವೇ ಅಧಿಕಾರಕ್ಕೆ ಬರಲಿದೆ. ಉಪ್ಪಾರ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡಲಿದ್ದೇವೆ. ಒಬಿಸಿಯಲ್ಲಿರುವ  ಉಪ್ಪಾರ ಜನಾಂಗ ಎಸ್'ಟಿ'ಗೆ ಸೇರ್ಪಡೆಗೆ ಮನವಿ ಮಾಡುವುದಾಗಿ ಸಿಎಂ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಚುನಾವಣೆ ಬಂತು ಇನ್ಯಾವಾಗ ಎಂದು ಸಮುದಾಯದ ನಾಯಕರೊಬ್ಬರು ಸಿಎಂ ಪ್ರಶ್ನಿಸಿದಾಗ ‘ಏ ಮುಂದೆ ನಾವೇ ಅಧಿಕಾರಕ್ಕೆ  ಬರೋದು, ಮಾಡ್ತಿವಿ ಸುಮ್ನೀರಯ್ಯ..’ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಉಪ್ಪಾರ ಅಭಿವೃದ್ಧಿ ನಿಗಮ ,ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದೇವೆ. ಚುನಾವಣೆಯಲ್ಲಿ ನಮಗೆ ಅಶೀರ್ವಾದ ಮಾಡಿದ್ರೆ ಮತ್ತಷ್ಟು ಅಭಿವೃದ್ಧಿ ಮಾಡ್ತೀನಿ ಎಂದರು ಸಿಎಂ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ
ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ