
ನವದೆಹಲಿ: ಸಿಬಿಐನ ವಿಶೇಷ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ರಾಕೇಶ್ ಆಸ್ತಾನ ಅವರನ್ನು ನೇಮಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸರ್ಕಾರೇತರ ಸಂಸ್ಥೆಯೊಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಸಿಬಿಐನ ವಿಶೇಷ ನಿರ್ದೇಶಕ ಹುದ್ದೆಗೆ ರಾಕೇಶ್ ಆಸ್ತಾನ ಹೆಸರನ್ನು ಕಳೆದ ಅ.26ರಂದು ಕೇಂದ್ರ ಜಾಗೃತಿ ಆಯುಕ್ತ ಕೆ.ವಿ. ಚೌಧರಿ ನೇತೃತ್ವದ ಸಮಿತಿಯು ಸರ್ವಾನುಮತದಿಂದ ಅಂತಿಮಗೊಳಿಸಿತ್ತು.
ಕಾಮನ್ ಕಾಸ್ ಎಂಬ ಸರ್ಕಾರೇತರ ಸಂಸ್ಥೆಯು ಸುಪ್ರೀಂ ಕೋರ್ಟಿನಲ್ಲಿ ಅರ್ಜಿಯನ್ನು ಸಲ್ಲಿಸಿದ್ದು, ಆಸ್ತಾನ ಅವರ ನೇಮಕವನ್ನು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಕೂಡಾ ವಿರೋಧಿಸಿದ್ದಾರೆ ಎಂದು ಹೇಳಲಾಗಿದೆ.
ತನಿಖೆಯ ಹಂತದಲ್ಲಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಆಸ್ತಾನ ಹೆಸರು ಕೇಳಿಬಂದಿದೆ ಎಂದು ವರ್ಮಾ ಹೇಳಿದ್ದರು ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.