
ನವದೆಹಲಿ (ನ.28): ರಾಷ್ಟ್ರ ರಾಜಧಾನಿಯಲ್ಲಿ ಮಿತಿಮೀರುತ್ತಿರುವ ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಡಿಸೇಲ್ ಆಧಾರಿತ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಿ ಎಂದು ರಾಷ್ಟ್ರೀಯ ಹಸಿರು ಪ್ರಾಧಿಕಾರ ದೆಹಲಿ ಸರ್ಕಾರ ಹಾಗೂ ಪೋಲಿಸರಿಗೆ ನಿರ್ದೇಶಿಸಿದೆ.
ಸ್ವಾಧೀನಕ್ಕೆ ತೆಗೆದುಕೊಂಡ ವಾಹನಗಳನ್ನು ವಿಲೇವಾರಿ ಮಾಡಲು ಭೂಮಿಯನ್ನು ಗುರುತಿಸಲು ನೆರೆ ರಾಜ್ಯಗಳೊಡನೆ ಮಾತುಕತೆ ನಡೆಸುವಂತೆ ಆಮ್ ಆದ್ಮಿ ಪಕ್ಷಕ್ಕೆ ಪೀಠವು ಸೂಚನೆ ನಿಡಿದೆ.
ವಾಹನ ವಿಲೇವಾರಿ ಉದ್ದೇಶಕ್ಕಾಗಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ ಎರಡು ಸ್ಥಳಗಳನ್ನು ಸಲಹೆ ಮಾಡಿದೆ.
ಈಗಾಗಲೇ ಹತ್ತು ವರ್ಷಗಳಿಗಿಂತ ಹಳೆಯ ಡಿಸೆಲ್ ವಾಹನಗಳನ್ನು ನಿಷೇಧಿಸುವಂತೆ ದೆಹಲಿ ಸರ್ಕಾರ ಕಟ್ಟುನಿಟ್ಟಾಗಿ ಆದೇಶಿಸಿತ್ತು. ಆದರೆ ಇದು ಪರಿಣಾಮಕಾರಿಯಾಗಿ ಜಾರಿಯಾಗಿಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಪೀಠ, ಈಗಲೂ ರಸ್ತೆಗಳಲ್ಲಿ ಅಂತಹ ವಾಹನಗಳು ಅಲ್ಲಲ್ಲಿ ಕಾಣಸಿಗುತ್ತಿದ್ದು, ಟ್ರಾಫಿಕ್ ಪೋಲಿಸರು ಏನೂ ಕ್ರಮ ಕೈಗೊಳ್ಳುತ್ತಿಲ್ಲವೆಂದು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.