21 ತಿಂಗಳ ಹಸುಳೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಹಸಿರು ಪೀಠ

Published : Jul 04, 2017, 05:41 PM ISTUpdated : Apr 11, 2018, 01:13 PM IST
21 ತಿಂಗಳ ಹಸುಳೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಹಸಿರು ಪೀಠ

ಸಾರಾಂಶ

ಶಬ್ದಮಾಲಿನ್ಯಕ್ಕೆ ಸಂಬಂಧಿಸಿದಂತೆ 21 ತಿಂಗಳ ಮಗು ಸಲ್ಲಿಸಿದ್ದ ಅರ್ಜಿಯನ್ನು ಹಸಿರು ನ್ಯಾಯಾಧೀಕರಣ ಪೀಠವು ವಿಚಾರಣೆ ನಡೆಸಲು ನಿರಾಕರಿಸಿದ ಘಟನೆ ನಡೆದಿದೆ.

ನವದೆಹಲಿ : ಶಬ್ದಮಾಲಿನ್ಯಕ್ಕೆ ಸಂಬಂಧಿಸಿದಂತೆ 21 ತಿಂಗಳ ಮಗು ಸಲ್ಲಿಸಿದ್ದ ಅರ್ಜಿಯನ್ನು ಹಸಿರು ನ್ಯಾಯಾಧೀಕರಣ ಪೀಠವು ವಿಚಾರಣೆ ನಡೆಸಲು ನಿರಾಕರಿಸಿದ ಘಟನೆ ನಡೆದಿದೆ.

ಉತ್ತರ ದೆಹಲಿಯ ಅಶೋಕ್ ವಿಹಾರದಲ್ಲಿರುವ ಶಾಲೆಯೊಂದರಿಂದ ಶಬ್ದ ಮಾಲಿನ್ಯವಾಗುತ್ತಿದೆ, ಟ್ರಾಫಿಕ್ ಜಾಮ್ ಆಗುತ್ತದೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಪ್ರಾಣಾಪಾಯವಿದೆಯೆಂದು 21 ತಿಂಗಳು ಪ್ರಾಯದ ಬೇಬಿ ಅರ್ಶಿತ ಖಾತ್ರಿ, ಆಕೆಯ ತಾಯಿ ಹಾಗೂ ಅಜ್ಜಿ ಸಲ್ಲಿಸಿದ್ದ ಅರ್ಜಿಯನ್ನು ಹಸಿರು ನ್ಯಾಯಾಧೀರಣವು ತಿರಸ್ಕರಿಸಿದೆ.

ನಿಯಮಗಳನ್ನು ಉಲ್ಲಂಘಿಸಿದ್ದಾರೆಂದು ಸಾಬೀತು ಪಡಿಸಲು ಶಾಲೆಯ ಘಂಟೆ ಅಥವಾ ಧ್ವನಿವರ್ಧಕಗಳು ಶಬ್ದ ಮಾಲಿನ್ಯಕ್ಕೆ ಕಾರಣವಾಗಿದೆಯೆಂದು ಹೇಳಿದರೆ ಸಾಲದು, ಎಂದು ಪೀಠ ಅಭಿಪ್ರಾಯಪಟ್ಟಿದೆ.

ಶಾಲೆಗೆ ಬರುವ ವಾಹನಗಳಿಂದ ವಾಯುಮಾಲಿನ್ಯವಾಗುತ್ತಿದೆ ಹಾಗೂ ಅವುಗಳ ಹೊಗೆಯಿಂದ ಸ್ಥಳೀಯ ನಿವಾಸಿಗಳು ಕಾಯಿಲೆಗೊಳಗಾಗುತ್ತಿದ್ದಾರೆ ಎಂದು ಅರ್ಜಿದಾರರು ಹೇಳಿದ್ದರು.

ಆದರೆ ಅದಕ್ಕೆ ಯಾವುದೇ ಪುರಾವೆಗಳಿಲ್ಲದ ಹಿನ್ನೆಲೆಯಲ್ಲಿ ಹಸಿರು ಪೀಠವು ಆ ವಾದವನ್ನು ಅಲ್ಲಗಳೆದಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ನಾಯಕರ ಕುಟುಂಬಕ್ಕೆ ಸಂಕಷ್ಟ: ಏನಿದು ಕೇಸ್?
ದೇಶದಲ್ಲಿ ಬಂಗಾರ, ಬೆಳ್ಳಿ ದಾಖಲೆ : ಬೆಲೆ ಏರಿಕೆ ಪರ್ವದ ಹಿಂದಿನ ರಹಸ್ಯ ಏನು?