
ನವದೆಹಲಿ[ಆ.11]: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ ಆರೋಪ ಪ್ರಕರಣದಲ್ಲಿ ಜಮ್ಮು- ಕಾಶ್ಮೀರದ ಮಾಜಿ ಶಾಸಕ ರಶೀದ್ ಎಂಜಿನಿಯರ್ರನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ) ಶನಿವಾರ ಬಂಧಿಸಿದೆ.
ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಈ ವೇಳೆ ನ್ಯಾಯಾಲಯ ಆತನನ್ನು 4 ದಿನಗಳ ಕಾಲ ಎನ್ಐಎ ವಶಕ್ಕೆ ಒಪ್ಪಿಸಿದೆ.
ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ರಶೀದ್ನನ್ನು ಭಯೋತ್ಪಾದನಾ ನಿಗ್ರಹ ದಳ ತನಿಖೆ ನಡೆಸುತ್ತಿತ್ತು. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕತಾವಾದಿಗಳಾದ ಶಬ್ಬೀರ್ ಶಾ, ಮಸ್ರತ್ ಅಲಾಂ, ಆಸಿಯಾ ಅಂದ್ರಾಬಿ ಈಗಾಗಲೇ ಬಂಧಿಸಲ್ಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.