ಮೈಸೂರು ನ್ಯಾಯಾಲಯ ಬಾಂಬ್ ಸ್ಫೋಟ ಆರೋಪಿಗಳ ಬಂಧನ

Published : Nov 27, 2016, 02:41 PM ISTUpdated : Apr 11, 2018, 12:38 PM IST
ಮೈಸೂರು ನ್ಯಾಯಾಲಯ ಬಾಂಬ್ ಸ್ಫೋಟ ಆರೋಪಿಗಳ ಬಂಧನ

ಸಾರಾಂಶ

ಮೈಸೂರು, ಆಂಧ್ರಪ್ರದೇಶದ ಚಿತ್ತೂರು ಮತ್ತು ನೆಲ್ಲೂರು, ಹಾಗೂ ಕೇರಳದ ಕೊಲ್ಲಮ್ ಹಾಗೂ ಮಲ್ಲಪುರಮ್ ನ್ಯಾಯಾಲಯಗಳ ಆವರಣಗಳಲ್ಲಿ ಬಾಂಬ್ ಸ್ಫೋಟ ನಡೆಸಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ಮಧುರೈ (ನ.28): ದೇಶದ ವಿವಿದೆಡೆ  ಬಾಂಬ್ ಸ್ಫೋಟ ನಡೆಸಿದ ಆರೋಪದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್’ಐಏ) ಹಾಗೂ ತಮಿಳುನಾಡು ಪೊಲೀಸರು ಮೂವರು ಶಂಕಿತ ಅಲ್-ಖೈದಾ ಉಗ್ರರನ್ನು ಬಂಧಿಸಿದ್ದಾರೆ.

ಬಂಧಿತರು- ಕರೀಮ್, ಆಯುಫ್ ಮತ್ತು ಅಬ್ಬಾಸ್ ಅಲಿ- ದಕ್ಷಿಣ ಭಾರತದ 6 ನ್ಯಾಯಾಲಯಗಳ ಆವರಣದಲ್ಲಿ ಬಾಂಬ್ ಸ್ಫೋಟ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಕಳೆದ ಆ.1ರಂದು ಮೈಸೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಶೌಚಾಲಯದಲ್ಲಿ ಬಾಂಬ್ ಸ್ಫೋಟ ನಡೆದಿತ್ತು.

ಬಂಧಿತರು ಮೈಸೂರು, ಆಂಧ್ರಪ್ರದೇಶದ ಚಿತ್ತೂರು ಮತ್ತು ನೆಲ್ಲೂರು, ಹಾಗೂ ಕೇರಳದ ಕೊಲ್ಲಮ್ ಹಾಗೂ ಮಲ್ಲಪುರಮ್ ನ್ಯಾಯಾಲಯಗಳ ಆವರಣಗಳಲ್ಲಿ ಬಾಂಬ್ ಸ್ಫೋಟ ನಡೆಸಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ಆರೋಪಿಗಳು ಮಧುರೈನವರಾಗಿದ್ದು, ‘ಬೇಸ್ ಮೂವ್’ಮೆಂಟ್’ ಎಂಬ ಸಂಘಟನೆಗೆ ಸೇರಿದವರು ಎಂದು ಹೇಳಲಾಗಿದೆ. ಮೂವರನ್ನು ಮಧುರೈಯಲ್ಲಿ ತನಿಖೆಗೆ ಒಳಪಡಿಸಲಾಗಿದೆ. ಬಳಿಕ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಮೈಸೂರಿಗೆ ತರಲಾಗುವುದು ಎಂದು ತಿಳಿದು ಬಂದಿದೆ.

ಕಳೆದ ಏ.7ರಂದು ಚಿತ್ತೂರಿನ ನ್ಯಾಯಲಯದಲ್ಲಿ, ಜೂ.15 ರಂದು ಕೇರಳದ ಕೊಲ್ಲಮ್ ನ್ಯಾಯಾಲಯದಲ್ಲಿ, ಆ.1 ರಂದು ಮೈಸೂರು ನ್ಯಾಯಾಲಯದಲ್ಲಿ, ಸೆ.12ರಂದು ಆಂಧ್ರದ ನೆಲ್ಲೂರು ನ್ಯಾಯಾಲಯದಲ್ಲಿ, ಹಾಗೂ ನ.2 ರಂದು ಕೇರಳದ ಮಲ್ಲಪುರಮ್ ನ್ಯಾಯಾಲಯದಲ್ಲಿ ಲಘು ತೀವ್ರತೆ ಬಾಂಬ್ ಸ್ಫೋಟಗಳು ನಡೆದಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಕ್ತಿ ಯೋಜನೆಯಡಿ 600 ಕೋಟಿಗೂ ಹೆಚ್ಚು ಮಹಿಳೆಯರ ಬಸ್ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ
ಡಿ.ಕೆ.ಶಿವಕುಮಾರ್‌ ಒಂದು ಬಾರಿ ಸಿಎಂ ಆಗೇ ಆಗುತ್ತಾರೆ: ಶಾಸಕ ಎಸ್‌.ಟಿ.ಸೋಮಶೇಖರ್‌