
ಕಾಸರಗೊಡು[ಏ. 28] ಶ್ರೀಲಂಕಾದ ಬಾಂಬ್ ದಾಳಿಗೆ ಸಂಬಂಧಿಸಿ ರಾಷ್ಟ್ರೀಯ ಭದ್ರಾತಾ ದಳ (ಎನ್ಐಎ) ಕೇರಳದ ಕಾಸರಗೋಡು ಸೇರಿ ಹಲವು ಕಡೆಗಳಲ್ಲಿ ದಾಳಿ ನಡೆಸಿ ಓರ್ವ ಯುವಕನನ್ನು ವಶಕ್ಕೆ ಪಡೆದಿದೆ.
ಪಾಲಕ್ಕಾಡ್ ಜಿಲ್ಲೆ ಕೈಲಂಗಾಡ್ ನ ನಿವಾಸಿ ರಿಯಾಜ್ ಅಬೂಬಕರ್ (28) ನನ್ನು ಎನ್ಐಎ ವಶಕ್ಕೆ ಪಡೆದು ವಿಚಾರಣೆಗಾಗಿ ಆತನನ್ನು ಎರ್ನಾಕುಳಂ ಗೆ ಕರೆದೊಯ್ಯಲಾಗಿದೆ.
ಎನ್ಐಎ ಸಿಬ್ಬಂದಿ ಮೂರು ಗಂಟೆಗಳ ಕಾಲ ರಿಯಾಜ್ ಮನೆಯಲ್ಲಿ ಹುಡುಕಾಟ ನಡೆಸಿದ್ದಾರೆ. ಆತ ಓದುವ ಪುಸ್ತಕಗಳು, ಮತ್ತು ಅಂತರ್ಜಾಲದಲ್ಲಿ ಭೇಟಿ ನೀಡಿದ ಸೈಟುಗಳ ಬಗೆಗೆ ಮಾಹಿತಿ ಕಲೆಹಾಕಿದ್ದಾರೆ.
ಬಂಧಿತ ರಿಯಾಜ್ ಟೋಪಿಯ ವ್ಯಾಪಾರಿಯಾಗಿದ್ದು ಸುಗಂಧ ದ್ರವ್ಯಗಳು ಮತ್ತು ಇತರ ವಿದೇಶಿ ಸಾಮಗ್ರಿಗಳನ್ನು ಬಳಸುತ್ತಿದ್ದ. ಸೋಶಿಯಲ್ ಮೀಡಿಯಾದಲ್ಲಿ ಸದಾ ಕಾಲ ಕಳೆಯುತ್ತಿದ್ದ ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.