ಮೈಸೂರು ನ್ಯಾಯಾಲಯ ಸ್ಫೋಟ: ಮೂವರು ಆರೋಪಿಗಳ ವಿರುದ್ಧ ಚಾರ್ಜ್’ಶೀಟ್

Published : May 24, 2017, 06:03 PM ISTUpdated : Apr 11, 2018, 01:09 PM IST
ಮೈಸೂರು ನ್ಯಾಯಾಲಯ ಸ್ಫೋಟ: ಮೂವರು ಆರೋಪಿಗಳ ವಿರುದ್ಧ ಚಾರ್ಜ್’ಶೀಟ್

ಸಾರಾಂಶ

ಸ್ಫೋಟಕ್ಕೆ ಸಂಬಂಧಿಸಿದಂತೆ ಈವರೆಗೆ 5 ಮಂದಿಯನ್ನು ಬಂಧಿಸಲಾಗಿದೆ. ಕಳೆದ ವರ್ಷ ಆ.1ರಂದು ಮೈಸೂರಿನ ಚಾಮರಾಜಪುರಮ್’ನಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಸಾರ್ವಜನಿಕ ಶೌಚಾಲಯದಲ್ಲಿ ಬಾಂಬ್ ಸ್ಫೋಟ ನಡೆದಿತ್ತು.

ಬೆಂಗಳೂರು (ಮೇ.24): ಕಳೆದ ವರ್ಷ ಆಗಸ್ಟ್​ 1ರಂದು ಮೈಸೂರಿನ ಕೋರ್ಟ್​ ಆವರಣದಲ್ಲಿ ನಡೆದ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್’ಐಏ)ಯು ಮೂವರರು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.

ತನಿಖೆ ನಡೆಸುತ್ತಿರುವ ಎನ್’ಐಏ ಹೈದರಾಬಾದ್ ಶಾಖೆಯು ಪ್ರಕರಣಕ್ಕೆ ಸಂಬಂಧಿಸಿ ಬೇಸ್ ಸಂಘಟನೆಯ ನೈನಾರ್ ಅಬ್ಬಾಸ್ ಅಲಿ (28), ಎಂ. ಸ್ಯಾಮ್ಸನ್ ಕರೀಮ್ ರಾಜಾ (23) ಹಾಗೂ ಎಸ್. ದಾವೂದ್ ಸುಲೈಮಾನ್ (23) ಎಂಬವರ ವಿರುದ್ಧ ವಿಶೇಷ ಎನ್’ಐಏ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದೆ.

ಸ್ಫೋಟಕ್ಕೆ ಸಂಬಂಧಿಸಿದಂತೆ ಈವರೆಗೆ 5 ಮಂದಿಯನ್ನು ಬಂಧಿಸಲಾಗಿದೆ. ಕಳೆದ ವರ್ಷ ಆ.1ರಂದು ಮೈಸೂರಿನ ಚಾಮರಾಜಪುರಮ್’ನಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಸಾರ್ವಜನಿಕ ಶೌಚಾಲಯದಲ್ಲಿ ಬಾಂಬ್ ಸ್ಫೋಟ ನಡೆದಿತ್ತು.

ಬಂಧಿತರು ಮೈಸೂರು, ಆಂಧ್ರಪ್ರದೇಶದ ಚಿತ್ತೂರು ಮತ್ತು ನೆಲ್ಲೂರು, ಹಾಗೂ ಕೇರಳದ ಕೊಲ್ಲಮ್ ಹಾಗೂ ಮಲ್ಲಪುರಮ್ ನ್ಯಾಯಾಲಯಗಳ ಆವರಣಗಳಲ್ಲಿ ಕೂಡಾ ಬಾಂಬ್ ಸ್ಫೋಟ ನಡೆಸಿದ್ದಾರೆಂದು ಆರೋಪಿಸಲಾಗಿದೆ.  

ಕಳೆದ ವರ್ಷ ಏ.7ರಂದು ಚಿತ್ತೂರಿನ ನ್ಯಾಯಲಯದಲ್ಲಿ, ಜೂ.15 ರಂದು ಕೇರಳದ ಕೊಲ್ಲಮ್ ನ್ಯಾಯಾಲಯದಲ್ಲಿ, ಆ.1 ರಂದು ಮೈಸೂರು ನ್ಯಾಯಾಲಯದಲ್ಲಿ, ಸೆ.12ರಂದು ಆಂಧ್ರದ ನೆಲ್ಲೂರು ನ್ಯಾಯಾಲಯದಲ್ಲಿ, ಹಾಗೂ ನ.2 ರಂದು ಕೇರಳದ ಮಲ್ಲಪುರಮ್ ನ್ಯಾಯಾಲಯದಲ್ಲಿ ಲಘು ತೀವ್ರತೆ ಬಾಂಬ್ ಸ್ಫೋಟಗಳು ನಡೆದಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನವೋದಯ ವಿವಾದ: 'ನಮ್ಮದು ಒಕ್ಕೂಟ ಸಮಾಜ' ತಮಿಳುನಾಡಿಗೆ ಸುಪ್ರೀಂ ಕೋರ್ಟ್ ತಪರಾಕಿ
NIMHANS MindNote app: ಮಾನಸಿಕ ಆರೋಗ್ಯಕ್ಕೆ ನಿಮ್ಹಾನ್ಸ್ ಮೈಂಡ್‌ ನೋಟ್‌ ಆ್ಯಪ್: ಈಗ ಕನ್ನಡದಲ್ಲಿ!