
‘ಹಿಂದೂ’ ಎಂಬ ಪದ ಮುಂದಿಟ್ಟುಕೊಂಡು ಕೆಲ ಸನಾತನಿಗಳು ಲಿಂಗಾಯತರನ್ನು ಒಡೆಯುವ ಸಂಚು ಮಾಡುತ್ತಿದ್ದು, ಇದಕ್ಕೆ ಲಿಂಗಾಯತರು ಕಿವಿ ಕೊಡಬಾರದು ಎಂದು ಬೈಲೂರು ನಿಷ್ಕಲ ಮಂಟಪ ಹಾಗೂ ಮುಂಡರಗಿ ತೋಂಟದಾರ್ಯ ಮಠದ ನಿಜಗುಣ ಪ್ರಭು ತೋಂಟದಾರ್ಯ ಶ್ರೀಗಳು ಹೇಳಿದರು.
ನ.5ರಂದು ಹುಬ್ಬಳ್ಳಿಯಲ್ಲಿ ನಡೆಯುವ ಲಿಂಗಾ ಯತ ಬೃಹತ್ ರ್ಯಾಲಿ ಅಂಗವಾಗಿ ಗುರುವಾರ ಗದಗಿನ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಇಷ್ಟು ವರ್ಷ ‘ಹಿಂದೂ’ ಎಂಬ ಶಬ್ದದಿಂದಲೇ ನಮ್ಮನ್ನು ಮೋಸ ಮಾಡುವ ಕೆಲಸ ನಡೆಯುತ್ತಿದ್ದು, ಮುಂದೆಯೂ ಅದನ್ನೇ ಮಾಡಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ. ಬಸವಣ್ಣನನ್ನು ಓಡಿಸಿದವರು ಮುಸ್ಲಿಮರು, ಕ್ರೈಸ್ತರಲ್ಲ. ಬದಲಾಗಿ ಸನಾತನವಾದಿಗಳು. ರುದ್ರಾಕ್ಷಿ ಮತ್ತು ಲಿಂಗಗಳನ್ನು ತೊಟ್ಟವರ ಮೇಲೆ ನಡೆಸಿದ ದಬ್ಬಾಳಿಕೆ, ಹತ್ಯೆ ಕುರಿತು ದಾಖಲೆಗಳಲ್ಲಿ ಉಲ್ಲೇಖವಿದೆ.
ಈಗಲೂ ರಾಜ್ಯಾದ್ಯಂತ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಗೊಂದಲ ಸೃಷ್ಟಿಸುವ ಮೂಲಕ ಲಿಂಗಾಯತರಲ್ಲಿ ಒಗ್ಗಟ್ಟು ಮೂಡದಂತೆ ಮಾಡುತ್ತಿದ್ದಾರೆ. ಹೀಗಾಗಿ, ಲಿಂಗಾಯತರು ಇತಿಹಾಸವನ್ನು ಚೆನ್ನಾಗಿ ಓದಿಕೊಳ್ಳಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.