
ಮಂಡ್ಯ (ಜು. 01): ಮಂಡ್ಯದಲ್ಲಿ ಮನೆ ಮಾಡುವ ನಿಖಿಲ್ ಕುಮಾರಸ್ವಾಮಿ ಕನಸು ಸದ್ಯಕ್ಕೆ ನನಸಾಗುವ ಸಾಧ್ಯತೆಗಳು ಕಾಣುತ್ತಿಲ್ಲ. ಏಕೆಂದರೆ ಮಂಗಳವಾರದಿಂದ ಆಷಾಡ ಮಾಸ ಆರಂಭವಾಗಲಿದ್ದು, ಈ ಸಂದರ್ಭದಲ್ಲಿ ಸಾಮಾನ್ಯವಾಗಿ ಭೂಮಿ, ಮನೆ, ವಾಹನಗಳ ಖರೀದಿ ಮಾಡುವುದಿಲ್ಲ ಹಾಗೂ ಯಾವುದೇ ಶುಭ ಕಾರ್ಯ ಮಾಡುವುದಿಲ್ಲ.
ಈ ಹಿನ್ನೆಲೆಯಲ್ಲಿ ನಿಖಿಲ್, ಮಂಡ್ಯದಲ್ಲಿ ಮನೆ ಮಾಡುವುದು ಇನ್ನೊಂದು ತಿಂಗಳು ತಡವಾಗಲಿದೆ ಎಂದು ಅವರ ಆಪ್ತವಲಯ ಹೇಳುತ್ತಿದೆ. ಕೆಲ ದಿನಗಳ ಹಿಂದೆ ಮಂಡ್ಯಗೆ ಆಗಮಿಸಿದ್ದ ನಿಖಿಲ್, ಮಂಡ್ಯದಿಂದ ಕೆಲವೇ ಕಿ.ಮೀ. ಅಂತರದಲ್ಲಿ ತೋಟ ಖರೀದಿಸಿ ಅಲ್ಲಿ ಮನೆ ನಿರ್ಮಿಸಲಾಗುವುದು. ಇದಕ್ಕೆ ಎಲ್ಲಾ ತಯಾರಿಗಳು ನಡೆದಿದ್ದು, ಶೀಘ್ರದಲ್ಲೇ ಮನೆ ಮಾಡುವೆ ಎಂದಿದ್ದರು.
ನಾನಿಲ್ಲದಿದ್ದರೂ ಆ ಮನೆಗೆ ಯಾರು ಬೇಕಾದರೂ ಬರಬಹುದು. ನಿಮ್ಮ ಕಷ್ಟಗಳಿಗೆ ಅಲ್ಲಿ ಸ್ಪಂದನೆ ದೊರೆಯಲಿದೆ ಎಂದು ಹೇಳಿದ್ದರು. ಅಲ್ಲದೇ ಆ ಮನೆಗೆ ‘ನಿಮ್ಮ ಮನೆ’ ಎಂದು ಹೆಸರನ್ನು ಇಡಲಾಗುವುದು ಎಂದು ಸಹ ಹೇಳಿದ್ದರು.
ಆದರೆ, ಇದೀಗ ಮಂಗಳವಾರದಿಂದ ಆಷಾಡ ಮಾಸ ಆರಂಭವಾಗಲಿದೆ. ಹಾಗಾಗಿ ಶ್ರಾವಣ ಮಾಸ ಆರಂಭಗೊಳ್ಳುವ ತನಕ ಹೊಸದಾಗಿ ಜಮೀನು ಖರೀದಿಗೆ ನಿಖಿಲ್ ಮುಂದಾಗುವುದಿಲ್ಲ ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.